ಬೆಂಗಳೂರು(ದೇವನಹಳ್ಳಿ): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ ಪತಿಋಾಯ ತಾನೂ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಈ ದುರಂತ ನಡೆದಿದೆ.
ಹೆಂಡತಿ ಸುಮಾ(35)ರನ್ನು ಡಂಬಲ್ಸ್ ನಲ್ಲಿ ಹೊಡೆದು ಕೊಲೆ ಮಾಡಿದ ಪತಿ ಶಾಮಣ್ಣ (40) ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಗಂಡ ಹೆಂಡತಿ ಕಲಹಕ್ಕೆ ಇಬ್ಬರು ಗಂಡು ಮಕ್ಕಳು ಅನಾಥಾರಾಗಿದ್ದಾರೆ. ವಿಜಯಪುರ ಪೋಲಿಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.