ಮಂಡ್ಯ: ರೈತರ ವಿರೋಧದ ನಡುವೆಯೂ ಕಾವೇರಿ ಆರತಿಗೆ ಸಿದ್ಧತೆ ಹಿನ್ನೆಲೆ ಸಕ್ಕರೆನಾಡು ಮಂಡ್ಯದಲ್ಲಿ ರೈತರ ಪ್ರೋಟೆಸ್ಟ್ ತೀವ್ರಗೊಂಡಿದ್ದು, ಹೆದ್ದಾರಿ ತಡೆದು ರಾಜ್ಯ ಸರ್ಕಾರ ಹಾಗೂ ಶಾಸಕ ಗಣಿಗ ರವಿಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ರೈತರ ವಿರುದ್ಧ ಶಾಸಕ ಗಣಿಗ ರವಿಕುಮಾರ್ ಹೇಳಿಕೆ ಖಂಡಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿಯಿಂದ ಬೆಂ-ಮೈ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಯೊಂಜನೆಯಿಂದಾಗುವ ಮಾರಕದ ಕರ ಪತ್ರ ಬಿಡುಗಡೆ ಮಾಡಲಾಗಿದ್ದು, ರೈತರ ಬಗ್ಗೆ ಮಾತನಾಡಬೇಕಾದರೆ ಶಾಸಕರು ಎಚ್ಚರಿಕೆ ವಹಿಸಬೇಕು. ಉಸ್ತುವಾರಿ ಸಚಿವರ ಸಭೆಯ ನಿರ್ಧಾರವನ್ನು ಶಾಸಕ ಗಣಿಗ ರವಿಕುಮಾರ್ ಉಲ್ಲಂಘನೆ ಮಾಡಿದ್ದಾರೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಭಾರತ ಎಂದರೆ ರೈತರು ರೈತರ ಹೋರಾಟದ ಬಗ್ಗೆ ಹಗುರವಾಗಿ ಮಾತನಾಡಬಾರದು. ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ನಿಂದ ಯಾವ ಅಭಿವೃದ್ಧಿ ಆಗುತ್ತದೆ? ಹಳ್ಳಿಗಳು, ಕಾಲೋನಿಗಳು ಅಭಿವೃದ್ಧಿ ಆಗುತ್ತಾ? ನಿಮ್ಮ ಹೇಳಿಕೆಗೆ ತೀವ್ರ ಖಂಡನೆ ಇದೆ. ತಕ್ಷಣವೇ ಈ ನಿರ್ಧಾರದಿಂದ ಕೈ ಬಿಟ್ಟು ಎಚ್ಚರಿಕೆ ವಹಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತ ಮುಖಂಡೆ ಸುನಂದಾ ಜಯರಾಮ್, ನಾಗಣ್ಣಗೌಡ, ಇಂಡವಾಳು ಚಂದ್ರಶೇಖರ್, ಅಣ್ಣೂರು ಮಹೇಂದ್ರ, ಶಿವಳ್ಳಿ ಚಂದ್ರಶೇಖರ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು.