ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಧನಗೆರೆ ಸಮೀಪ ಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರಸ್ವಾಮಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನ. ಚಾಲಕ ಮೃತಪಟ್ಟು ಬಸ್ ನಲ್ಲಿದ್ದ ಪ್ರಯಾಣಿಸುತ್ತಿದ್ದ ಇಬ್ಬರಿಗೆ ತೀವ್ರ ಪೆಟ್ಟಾಗಿರುವ ಘಟನೆ ನಡೆದಿದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಮಲೆಮಹದೇಶ್ವರ ಬೆಟ್ಟದಿಂದ ಬೆಂಗಳೂರಿನತ್ತ ತೆರಳ್ಳುತ್ತಿದ್ದಂತಹ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದಂತಹ ಬಸ್ ಹಾಗೂ ಕಾರಿನ ನಡುಗೆ ಧನಗೆರೆ ಸಮೀಪ ಡಿಕ್ಕಿ ಸಂಭವಿಸಿದ.ಈ ವೇಳೆ ಕಾರಿನಲ್ಲಿದಂತಹ ತಮಿಳುನಾಡು ಮೂಲದ ಕಾರಿನ ಚಾಲಕ ವಿಜ್ಞೇಶ್ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ
ಹಾಗೂ ಬಸ್ ಚಾಲಕ ರಮೇಶ್ ಹಾಗೂ ಪ್ರಯಾಣಿಕ ಪಾಳ್ಯ ಗ್ರಾಮದ ಜಯರಾಮ್ ಎಂಬಾತ ಗಾಯಗೊಂಡು ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸ್ಥಳೀಯರು ಆಂಬುಲೇನ್ಸ್ ಮುಖಾಂತರ ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಳ್ಳೆಗಾಲ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಪರಿಶೀಲನೆ ನಡೆಸಿ ಮೃತ ದೇಹವನ್ನು ವಶಕ್ಕೆ ಪಡೆದು ಕೇಸು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.