ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಪ್ರಕರಣ ಸಂಭವಿಸಿದ್ದು, ಬೆಂಗಳೂರು ಜೆ.ಪಿ.ನಗರ ಮೂಲದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಹೋಗುವಾಗ ದುರ್ಘಟನೆ ನಡೆದಿದೆ.
ಮಂಡ್ಯದ ತೂಬಿನಕೆರೆ ಎಕ್ಸಿಟ್ ಬಳಿ ಕಾರು ಮತ್ತು ಐರಾವತ ಬಸ್ ನಡುವೆ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಸತ್ಯಾನಂದ ರಾಜೇ ಆರಸ್ (51), ಇವರ ಪತ್ನಿ ನಿಶ್ಚಿತಾ (45), ಚಂದ್ರು(62), ಇವರ ಪತ್ನಿ ಸುವೇದಿನಿ ರಾಣಿ(50) ಮೃತರು.
ಹುಕ್ಕೇರಿ ಅಟೆಂಡರ್ ಅಪಹರಣ ಪ್ರಕರಣ ; ನಾಟಕೀಯ ಟ್ವಿಸ್ಟ್ ಏನು ಗೊತ್ತಾ..?
ಎಕ್ಸ್ಪ್ರೆಸ್ ವೇ ನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವುಂಟಾಗಿದ್ದು, ಗೊಂದಲದಿಂದ ಮತ್ತೆ ಎಕ್ಸ್ಪ್ರೆಸ್ ವೇಗೆ ಕಾರು ತಿರುಗಿಸಿದ್ದಾನೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ KSRTC ಐರಾವತ ಬಸ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಐಜಿ ಬೋರಲಿಂಗಯ್ಯ ಹಾಗೂ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮಂಡ್ಯ ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.