ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ್ದ ಕಾಲ್ತುಳಿತ ಘಟನೆಯು ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ.
ಜನರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಅರೆಸ್ಟ್!
ನಗರದಲ್ಲಿ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದರು.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂ.1 ಆರ್ಸಿಬಿ ಅಲ್ಲ, ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂ.1, ಉಪ ಮುಖ್ಯಮಂತ್ರಿಗಳು 2ನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂ.3, ನಂತರದ ಹೊಣೆಗಾರರು ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಎಂದು ತಿಳಿಸಿದರು.