ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇನ್ನು ಮುಂದೆ ಬೆಂಗಳೂರು– ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೇ.20ಕ್ಕೆ ಗ್ಯಾರಂಟಿ ಸರ್ಕಾರಕ್ಕೆ 2ವರ್ಷ: ಹೊಸಪೇಟೆಯಲ್ಲಿ ನಡೆಯೋದು ಸಾಧನಾ ಸಮಾವೇಶ ಅಲ್ಲವಂತೆ..!