ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿದ್ದಾರೆ. ಸ್ಥಳೀಯರು ಮತ್ತು ವಿಪಕ್ಷಗಳು ಈ ನೇಮಕಾತಿಯನ್ನು ವಿರೋಧಿಸುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಪಂ ಸದಸ್ಯನೂ ಆಗಿರುವ ಹರೀಶ್ ಇಂಜಾಡಿಗೆ ಅಧ್ಯಕ್ಷ ಪಟ್ಟ ಸಿಕ್ಕಿದೆ.
ಈತ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು. ಅದರಂತೆ ಹರೀಶ್ಗೆ, ಕುಕ್ಕೆ ವ್ಯವಸ್ಥಾಪನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ. ಆಡಳಿತ ಮಂಡಳಿ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಸದಸ್ಯರಾಗಬಾರದು ಎಂಬ ನಿಯಮ ಮೀರಿ ಆಯ್ಕೆ ಮಾಡಲಾಗಿದೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾನೆ.
ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ. ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.
ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿ ಶೀಟರ್ ಎಂದಿದ್ದ ಕಾಂಗ್ರೆಸ್. ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.