ಆರತಿ ವೇಳೆ ಬೆಂಕಿ ತಗುಲಿ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ ನಿಧನ

ನವದೆಹಲಿ: ಆರತಿ ವೇಳೆ ಬೆಂಕಿ ತಗುಲಿ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ ನಿಧನರಾಗಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕಿ ಗಿರಿಜಾ ವ್ಯಾಸ್‌ ಅವರ ನಿಧನದ ಕುರಿತು ಸಹೋದರ ಗೋಪಾಲ್ ಶರ್ಮಾ ಖಚಿತಪಡಿಸಿದ್ದಾರೆ. ಕಳೆದ ಏ.2ರಂದು ಗಿರಿಜಾ ವ್ಯಾಸ್‌ ಅವರು ಉದಯಪುರದಲ್ಲಿರುವ ತಮ್ಮ ಮನೆಯಲ್ಲಿ ದೇವರಿಗೆ ಆರತಿ ಮಾಡುವ ವೇಳೆ ಅವರ ಬಟ್ಟೆಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಾಗಿತ್ತು. ಕೂಡಲೇ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾಋ ಆಸ್ಪತ್ರೆಯಲ್ಲೇ ಗಿರಿಜಾ ವ್ಯಾಸ್ ಕೊನೆಯುಸಿರೆಳೆದಿದ್ದಾರೆ. … Continue reading ಆರತಿ ವೇಳೆ ಬೆಂಕಿ ತಗುಲಿ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ ನಿಧನ