ಬೆಂಗಳೂರು: ಲಿಕ್ಕರ್ ಹಗರಣ ಸಂಬಂಧ ಬೆಂಗಳೂರಿನಿಂದ ವಿದೇಶಕ್ಕೆ ಹಾರುತ್ತಿದ್ದ ಮಾಜಿ ಶಾಸಕನನ್ನು ಕೆಂಪೇಗೌಡ ಏರ್ಪೋಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಂದ್ರಗಿರಿಯ ಮಾಜಿ ಶಾಸಕ ಚೆವ್ವಿರೆಡ್ಡಿ ಬಾಸ್ಕರ್ ರೆಡ್ಡಿಯನ್ನ ವಶಕ್ಕೆ ಪಡೆದಿದ್ದು,
ವಿದೇಶಕ್ಕೆ ತೆರಳುತ್ತಿದ್ದ ವೇಳೆ ಲುಕ್ ಔಟ್ ನೋಟಿಸ್ ಇದ್ದ ಕಾರಣ ಅಕ್ರಮವಾಗಿ ವಿದೇಶಕ್ಕೆ ತೆರಳಲು ಮುಂದಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ರೆಡ್ಡಿಯನ್ನು ವಶಕ್ಕೆ ಪಡೆದಿರುವ ಕುರಿತು ವಿಮಾನ ನಿಲ್ದಾಣ ಪೊಲೀಸರು ಆಂಧ್ರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಜಯವಾಡದಲ್ಲಿ ಎಸ್ಐಟಿ ರೆಡ್ಡಿಯನ್ನು ವಶಕ್ಕೆ ಪಡೆಯಲಿದೆ ಎಂದು ಮೂಲಗಳು ತಿಳಿಸಿದೆ.