Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    By AIN AuthorJune 21, 2025
    Share
    Facebook Twitter LinkedIn Pinterest Email
    Demo

    ದಕ್ಷಿಣ ಕನ್ನಡ ಜಿಲ್ಲೆ/ಬೆಂಗಳೂರು:-ಹೆಲ್ಪ್‌ಲೈನ್‌ ಹೆಸರಿನಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್‌ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆ ನೊಂದವರಿಗೆ ಸಹಾಯ ಮಾಡುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌, ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಇದೀಗ ಪ್ರಕರಣ ದಾಖಲಾಗಿದೆ.

    ರಾಜೇಶ್‌, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ನ ಮಾಲಾಡಿ ನಿವಾಸಿ. ವೃತ್ತಿಯಲ್ಲಿ ಗಾಯಕರಾಗಿರುವ ರಾಜೇಶ್, Arvind vivek ಎಂಬ ಹೆಸರಿನಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. 2024 ರಲ್ಲಿ ಫೇಸ್ಬುಕ್ ಮೂಲಕ ಸಂಧ್ಯಾ ಪವಿತ್ರ ನಾಗರಾಜ್ ಪರಿಚಯವಾಗಿದೆ. ಈ ವೇಳೆ ಹೋರಾಟಗಾರ್ತಿ ಎಂದು ನಂಬಿಸಿದ್ದ ಸಂಧ್ಯಾ, Helpline ಹೆಸರಿನಲ್ಲಿ ನೊಂದವರಿಗೆ, ವಂಚನೆಗೊಳಪಟ್ಟವರಿಗೆ ಸಹಾಯ ಮಾಡುತ್ತಿರುವುದಾಗಿ ತಿಳಿಸಿದ್ದರು.

    ರಾಜ್ಯದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಅನೇಕ ಪ್ರಕರಣ ಬಗೆಹರಿಸಿಕೊಟ್ಟಿರುವುದಾಗಿ ಸಂಧ್ಯಾ ಹೇಳಿಕೊಂಡಿದ್ದರು. ಈ ವೇಳೆ ಬಂಟ್ವಾಳ‌ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ರಾಜೇಶ್‌ ತಿಳಿಸಿದ್ದರು. ಈ ಪ್ರಕರಣವನ್ನು‌ ಹೈಕೋರ್ಟ್‌ನಲ್ಲಿ ಬಗೆಹರಿಸುವುದಾಗಿ ಆಕೆ ನಂಬಿಸಿದ್ದರು. ಈ ಬಗ್ಗೆ ದಾಖಲಾತಿ ಪಡೆಯಲು 2025ರ ಜನವರಿಯಲ್ಲಿ ಬೆಂಗಳೂರಿನ ಜೆ.ಪಿ‌ನಗರದ ಮನೆಗೆ ಸಂಧ್ಯಾ ಕರೆಸಿದ್ದರು.
    ಬಳಿಕ ಪ್ರಕರಣ ಬಗೆಹರಿಸಲು ಸ್ವಲ್ಪ ಖರ್ಚು ಇದೆ ಎಂದಿದ್ದರು.

    ದೂರುದಾರ ರಾಜೇಶ್‌ರಿಂದ ಹಂತ ಹಂತವಾಗಿ 3.20 ಲಕ್ಷ ರೂ. ಹಣ ಪಡೆದಿದ್ದರು. ಬಳಿಕವೂ ಸಮಸ್ಯೆ ಬಗೆಹರಿಯದ ಕಾರಣ ಈ ಬಗ್ಗೆ ರಾಜೇಶ್‌ ಪ್ರಶ್ನಿಸಿದ್ದರು. ಆಗ ಸಂಧ್ಯಾ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಸಂಶಯಗೊಂಡು ವಿಚಾರಿಸಿದಾಗ ಮೋಸ ಹೋಗಿರುವುದು ಬೆಳಕಿಗೆ ಬಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025

    ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್!

    June 21, 2025

    19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?

    June 21, 2025

    ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?

    June 21, 2025

    ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್

    June 21, 2025

    ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಿಜೆಪಿಗೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ!

    June 21, 2025

    ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪರಿಷತ್ ಶಾಸಕ ಟಿ. ಎ.ಶರವಣ ಭಾಗಿ

    June 21, 2025

    BJP ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ ಎಂದು ವಿಜಯೇಂದ್ರ ಹೇಳಿದ್ಯಾಕೆ..?

    June 21, 2025

    Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

    June 21, 2025

    ಕಾಂಗ್ರೆಸ್ ಈ ದೇಶದಲ್ಲಿ ಇದೇ ಎಂದುಕೊಳ್ಳಲು ಅಸಹ್ಯವಾಗುತ್ತೆ: ಸಚಿವ ವಿ.ಸೋಮಣ್ಣ ಕಿಡಿ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.