ಹುಬ್ಬಳ್ಳಿ: ಪಂಚ ಗ್ಯಾರಂಟಿ ನಿರ್ವಹಣೆಯಲ್ಲಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆಯೇ..? ಎಂಬ ಅನುಮಾನ ದಟ್ಟವಾಗಿದೆ. ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಜ್ಯ ಸರ್ಕಾರ ಮರು ಪಾವತಿಸಬೇಕಾದ ಬಾಕಿ ಮೊತ್ತ ಪ್ರತಿ ತಿಂಗಳು ಏರಿಕೆಯಾಗುತ್ತ ಸಾಗಿದ್ದು, ಈಗ 543ಕೋಟಿ ರೂ. ಗಡಿ ದಾಟಿದೆ.
ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಶಕ್ತಿ ಯೋಜನೆಯನ್ನು 2023ರ ಜೂನ್ 11ರಂದು ಕರ್ನಾಟಕ ಸರ್ಕಾರ ಜಾರಿಗೆ ತಂದಿತ್ತು. ಮಹಿಳೆಯರ ಪ್ರಯಾಣ ವೆಚ್ಚವನ್ನು ರಾಜ್ಯ ಸರ್ಕಾರ, ಸಾರಿಗೆ ಸಂಸ್ಥೆಗಳಿಗೆ ನಿಯಮಿತವಾಗಿ ಪಾವತಿಸುತ್ತದೆ. 2025-26ಸಾಲಿನಲ್ಲಿ ಉಚಿತ ಟಿಕೆಟ್ ವಿತರಣೆಯ 80% ಹಣವನ್ನು ಮರುಪಾವತಿ ಮಾಡುತ್ತಿದೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಆದರೆ ಸರ್ಕಾರ 2023 ಇತ್ತಿಚೆಗೆ ಗ್ಯಾರಂಟಿ ಯೋಜನೆ ಜಾರಿಯಿಂದ ಇದುವರೆಗೆ ಬರೋಬ್ಬರಿ 543 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಯೋಜನೆ ಜಾರಿಯಾದಾಗಿನಿಂದಲೂ ಯಾವ ತಿಂಗಳು ಸಹ ಸಂಸ್ಥೆಗೆ ಪೂರ್ಣ ಮೊತ್ತವನ್ನು ಪಾವತಿ ಮಾಡಿಲ್ಲ. ಇದರ ಪರಿಣಾಮವಾಗಿ ಬಾಕಿ ಮೊತ್ತದ ಗಾತ್ರ ಹಿಗ್ಗುತ್ತ ಸಾಗಿದೆ. ಪ್ರತಿ ತಿಂಗಳು 15ರಿಂದ 41 ಕೋಟಿ ರೂ. ವರೆಗೆ ಪಾವತಿ ಬಾಕಿ ಉಳಿಸಿಕೊಂಡಿದೆ. ಈ ನಿಟ್ಟಿನಲ್ಲಿ ಈಗ ಬಾಕಿ ಮೊತ್ತ 543 ಕೋಟಿ ತಲುಪಿದೆ. ಈಗಾಗಲೇ ಸರ್ಕಾರಕ್ಕೆ ಅಧಿಕಾರಿಗಳು ಪತ್ರ ಕೂಡ ಬರೆದಿದ್ದಾರೆ.
ವಾಕರಸಾ ಸಂಸ್ಥೆಯ ನೌಕರರ ಸಂಬಳ ಹಾಗೂ ಇತರ ಖರ್ಚು ಮಾತ್ರ ಲೆಕ್ಕ ಹಾಕಿಕೊಂಡು ರಾಜ್ಯ ಸರ್ಕಾರ ಪ್ರತಿ ತಿಂಗಳು 80% ಪಾವತಿಸುತ್ತಿದೆ ಎಂದು ಹೇಳಲಾಗುತ್ತಿದೆ. ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಇದ್ದಂತಿಲ್ಲ. ಅಲ್ಲದೆ ಸರ್ಕಾರ ಈ ರೀತಿ ನೂರಾರು ಕೋಟಿ ಬಾಕಿ ಉಳಿಸಿಕೊಂಡಿರುವುದು ಸಾರಿಗೆ ಸಂಸ್ಥೆಯ ನಿರ್ವಹಣೆಗೆ ಬಹುದೊಡ್ಡ ಹೊಡೆತ ಬೀಳಲಿದೆ.
ಕಲ್ಮೇಶ ಮಂಡ್ಯಾಳ ಹುಬ್ಬಳ್ಳಿ