ಗದಗ: ಗದಗ ಜಿಲ್ಲಾ ಪೊಲೀಸ್ ಹಾಗೂ ಗದಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ ಆಚರಣೆ ಮಾಡಲಾಯಿತು. ಗದಗ ಬೆಟಗೇರಿ ಅವಳಿ ನಗರದ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾದಕದ್ರವ್ಯ ವಿರೋಧ ಕುರಿತು ಜಾಗೃತಿ ಮೂಡಿಸಿದರು.
Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ
ಮಾದಕ ವಸ್ತುಗಳ ಬಳಕೆ ಮಾಡದಂತೆ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಜನ್ರಲ್ಲಿ ಅರಿವು ಮೂಡಿಸಿದರು. ನಂತರ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ ಅಂತರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಉದ್ಘಾಟಿಸಿದರು.
ಇನ್ನು ಮಾದಕ ದ್ರವ್ಯಗಳ ಕಳ್ಳಸಾಗಾಣಿಕೆ ಅಪರಾಧವಾಗಿದೆ. ಈ ಮಾದಕ ದ್ರವ್ಯಗಳು ಒಬ್ಬ ವ್ಯಕ್ತಿ ಮೇಲೆ ಪರಿಣಾಮ ಬೀರದೆ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಯುವ ಪೀಳಿಗೆಯ ಮೇಲೆ ದುಷ್ಪರಿಣಾಮ ಬೀರುತ್ತೆ. ಇದ್ರಿಂದ ಜನ ಜಾಗೃಕರಾಬೇಕು ಅಂತ ಎಸ್ಪಿ ಬಿ ಎಸ್ ನೇಮಗೌಡ ಮನವರಿಕೆ ಮಾಡಿದ್ರು.