ಬೆಂಗಳೂರು: ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,
ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!
ಈಗ ದೂರು ನೀಡಿದ್ದು ದೂರು ಆಧರಿಸಿ ಈಗಾಗಲೇ ಐದು ಜನರನ್ನ ಬಂಧನ ಮಾಡಲಾಗಿದೆ. ಬೆಳಗಾವಿ ಕಮಿಷನರ್ಗೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಇನ್ನೂ ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು.
ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.