ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ.
ಧಾರಕಾರ ಮಳೆ: ತಡೆಗೋಡೆ ಕುಸಿತ- ಎದೆನಡುಗಿಸುವ ಜಲಸ್ಫೋಟದ ಭಯಾನಕ ದೃಶ್ಯ ಇಲ್ಲಿದೆ!
ಗಂಭೀರ್ ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಅಭ್ಯಾಸ ಮುಂದುವರೆಸಿದ್ದು, ಈ ವಾರ ಗೌತಮ್ ಗಂಭೀರ್ ಇಂಗ್ಲೆಂಡ್ಗೆ ಮರಳದಿದ್ದರೆ ಹಂಗಾಮಿ ಕೋಚ್ನ ನೇಮಕ ಮಾಡಲಿದ್ದಾರೆ.
ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಹಿಂತಿರುಗುತ್ತಿದ್ದಂತೆ, ಬಿಸಿಸಿಐ ವಿವಿಎಸ್ ಲಕ್ಷ್ಮಣ್ ಅವರನ್ನು ಇಂಗ್ಲೆಂಡ್ಗೆ ಕಳುಹಿಸಿದ್ದಾರೆ. ಅಲ್ಲದೆ ಜೂನ್ 20 ರೊಳಗೆ ಗಂಭೀರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಪರಿಸ್ಥಿತಿ ಇರದಿದ್ದರೆ, ಭಾರತ ತಂಡವು ಲಕ್ಷ್ಮನ್ ಮುಂದಾಳತ್ವದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ತಂತ್ರಗಳನ್ನು ರೂಪಿಸಲಿದೆ.
ಈಗಾಗಲೇ ವಿವಿಎಸ್ ಲಕ್ಷ್ಮಣ್ ಅವರು ಇಂಗ್ಲೆಂಡ್ನಲ್ಲಿರುವ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದ ವೇಳೆ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ ವಿವಿಎಸ್ ಲಕ್ಷ್ಮಣ್ ಕಾಣಿಸಿಕೊಂಡಿದ್ದಾರೆ.
ಹೀಗಾಗಿ ಗೌತಮ್ ಗಂಭೀರ್ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾದ ಕೋಚಿಂಗ್ ಜವಾಬ್ದಾರಿ ಲಕ್ಷ್ಮಣ್ ಅವರ ಹೆಗಲೇರುವುದು ಖಚಿತ ಎನ್ನಬಹುದು.