Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Yatnal: ಮಂಗಳಮುಖಿಯರಿಗೂ ರೇಷನ್ ಕಾರ್ಡ್ ಕೊಡಿ – ಯತ್ನಾಳ್ ಆಗ್ರಹ

    By AIN AuthorDecember 11, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಮಂಗಳಮುಖಿಯರಿಗೂ ರೇಷನ್ ಕಾರ್ಡ್ ಕೊಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ ಮಾಡಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು, ಇತ್ತೀಚೆಗೆ ಸರ್ಕಾರದ ರೇಷನ್ ಕಾರ್ಡ್ ವಿತರಣೆ ಸೇರಿದಂತೆ ಹಲವು ಯೋಜನೆಗಳಿಗೆ ತೃತೀಯ ಲಿಂಗೀಯರು ಅರ್ಜಿ ಹಾಕಲು ಅರ್ಹತೆ ಇದ್ದರೂ ಸಹ ಸರ್ಕಾರದ ಅಂತರ್ಜಾಲದಲ್ಲಿ ಇದಕ್ಕೆ ಅವಕಾಶ ಇಲ್ಲದೆ ಇರುವುದು ಇವರಿಗೆ ತೀವ್ರ ಹಿನ್ನಡೆಯಾಗಿದೆ ಎಂದರು.

    ಅಂತರ್ಜಾಲದಲ್ಲಿ ಅರ್ಜಿ ಹಾಕಿದಾಗ: ಗಂಡು/ಹೆಣ್ಣು ಎರಡೇ ಆಯ್ಕೆಗಳಿದ್ದು, ಅವರು ಇವೆರಡಕ್ಕೂ ಸೇರದ ಕಾರಣ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ. ಇದಲ್ಲದೆ, ಸರ್ಕಾರದ ಬೇರೆ ಯೋಜನೆಗಳಿಗೂ ಸಹ ಇವರಿಗೆ ಈ ರೀತಿಯಾದ ಸಮಸ್ಯೆ ಉದ್ಭವಿಸುತ್ತಿದೆ. ಸಮಾಜವು ಹಾಗೂ ಸ್ವಂತ ಕುಟುಂಬವು ಇವರನ್ನು ಕೀಳಾಗಿ ಕಾಣುವ ಹಾಗೂ ಬಹಿಷ್ಕಾರ ಮಾಡುವುದರಿಂದ ಬಹುತೇಕ ತೃತೀಯ ಲಿಂಗಿಗಳು ತಮ್ಮ ಕುಟುಂಬವನ್ನು ಬಿಟ್ಟು ಪ್ರತ್ಯೇಕವಾಗಿದ್ದಾರೆ.

    ಕುಟುಂಬದ ಜೊತೆ ಇಲ್ಲ ಎಂಬ ತಾಂತ್ರಿಕ ನೆಪವನ್ನಿಟ್ಟು, ಇವರಿಗೆ ಪಡಿತರ ಚೀಟಿ ಕೂಡ ನಿರಾಕರಿಸಲಾಗುತ್ತಿದೆ. ಪಡಿತರ ಚೀಟಿಗೆ ಅರ್ಜಿ ಹಾಕುವ ಮಂಗಳಮುಖಿಯರು ತಮ್ಮ ಕುಟುಂಬದ ಜೊತೆಗಿಲ್ಲ ಎಂಬ ಕಾರಣಕ್ಕೆ, ಅವರ ಅರ್ಜಿಯನ್ನು ಸ್ವೀಕೃತಿ ಮಾಡದೆ ಅಥವಾ ಅದನ್ನು ತಿರಸ್ಕರಿಸುತ್ತಿರುವುದು ಇವರಿಗೆ ಮಾಡುತ್ತಿರುವ ಅನ್ಯಾಯ. ತೃತೀಯ ಲಿಂಗಿಗಳಿಗೆ ಸರ್ಕಾರ ಎಲ್ಲ ರೀತಿಯಾದ ಬೆಂಬಲ ನೀಡುವ ಅವಶ್ಯಕತೆಯಿದೆ, ಇಂತ ಸನ್ನಿವೇಶದಲ್ಲಿ ಅವರಿಗೆ ಬದುಕಲು ಬೇಕಾದ ಪಡಿತರ ಚೀಟಿಯನ್ನು ಕೊಡಲು ಪೂರಕ ವ್ಯವಸ್ಥೆಯಿಲ್ಲದೆ ಅವರು ಕಚೇರಿಯಿಂದ ಕಚೇರಿಗೆ ಅಲೆಯುತ್ತಿರುವುದು ಖೇದನೀಯವಾಗಿದೆ.

    ತೃತೀಯ ಲಿಂಗಿಗಳಿಗೆ ಪಡಿತರ ಚೀಟಿ ನೀಡದೆ ಇರುವುದು ಆರ್ಟಿಕಲ್ 21ರ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆರ್ಟಿಕಲ್ 21ರ ಅಡಿ ಯಾವುದೇ ವ್ಯಕ್ತಿ ವೈಯುಕ್ತಿಕ ಸ್ವಾತಂತ್ರ್ಯ (ಪರ್ಸನಲ್ ಲಿಬರ್ಟಿ) ನಿಂದ ವಂಚಿತರಾಗಬಾರದೆಂದು ಹೇಳುತ್ತದೆ. ಪಡಿತರ ಚೀಟಿಗೆ ಅರ್ಜಿ ಹಾಕುವ ಸಂದರ್ಭದಲ್ಲಿ ಮಂಗಳಮುಖಿಯರಿಗೂ ಇನ್ಪುಟ್ ಆಯ್ಕೆಯನ್ನು ನೀಡಬೇಕು. ಇದಲ್ಲದೆ, ಸರ್ಕಾರದ ಹಲವು ಯೋಜನೆಗಳಿಗೆ ಅರ್ಜಿ ಹಾಕುವ ಸಂದರ್ಭದಲ್ಲೂ ಸಹ ಅವರಿಗೆ ಸಮಾನ ಅವಕಾಶ ಕಲ್ಪಿಸಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.