ಬೆಂಗಳೂರು:- ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾರ್ದಿಕ್- ಗಿಲ್ ನಡುವಿನ ಸ್ನೇಹದಲ್ಲಿ ಬಿರುಕು!? GT ಕ್ಯಾಪ್ಟನ್ ಹೇಳಿದ್ದೇನು?
ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಸಿಎಂ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ ನೀಡುತ್ತೇವೆ. ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಎಲ್ಲವನ್ನೂ ಕೊಡುತ್ತಿದ್ದೇವೆ. 1 ರಿಂದ 1.50 ಲಕ್ಷ ವಿದ್ಯಾರ್ಥಿಗಳು ಸಂಖ್ಯೆ ಕಡಿಮೆ ಆಗುತ್ತಿದೆ. 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಿದ್ದೇನೆ. ಮಂಗಳೂರು, ಉಡುಪಿ, ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಫಲಿತಾಂಶ ಕಡಿಮೆ ಬಂದಿದೆ. ಹೀಗಾಗಿ, 5 ಸಾವಿರ ಕೋಟಿ ರೂಪಾಯಿ ಕೊಡುತ್ತಿದ್ದೇನೆ ಎಂದು ಹೇಳಿದರು.
ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು. ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿಶಾಲೆ, ರುದ್ರ ಭೂಮಿಗೆ ಸರ್ಕಾರಿ ಜಮೀನು, ನಿವೇಶ ಕೊಡಬೇಕು. ಸರ್ಕಾರಿ ಜಮೀನು ಇಲ್ಲದಿದ್ದರೇ, ಖರೀದಿ ಮಾಡಿ ಕೊಡಬೇಕು. ಇದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದೇನೆ. ಎಸ್ಸಿ, ಎಸ್ಟಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ಒಂದು ತಿಂಗಳೊಳಗೆ ನೀಡಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.
ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣ ದೂರು ದಾಖಲಿಸಿ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದ್ದೇನೆ ಎಂದು ತಿಳಿಸಿದರು
ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು. ಮಾದಕ ವಸ್ತು ಮಾರಾಟ ಮಾಡುವವರ ಅಂಗಡಿ ಮತ್ತಿತರ ಕೇಂದ್ರಗಳ ಪರವಾನಗಿ ರದ್ದುಗೊಳಿಸುವ ಸ೦ಬ೦ಧ ಕಾನೂನು ತಿದ್ದುಪಡಿ ತರುತ್ತೇವೆ ಎಂದು ಹೇಳಿದರು.