Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ರೈತರಿಗೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ 90% ಸಹಾಯಧನ..! ಅರ್ಜಿ ಸಲ್ಲಿಕೆ ಹೇಗೆ?

    By Author AINApril 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ಹೆಚ್ಚುತ್ತಲೇ ಇದೆ. ಇದರಿಂದ ಸಹಜವಾಗಿಯೇ ಕೃಷಿ ಯಂತ್ರೋಪಕರಣಗಳ ಬೇಡಿಕೆ ಹೆಚ್ಚುತ್ತಿದೆ. ಅಲ್ಲದೆ, ರೈತರು ಕೂಡ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಲು ಉತ್ಸುಕರಾಗಿದ್ದಾರೆ. ಹೀಗಾಗಿ ರೈತರು ಕೃಷಿ ಯಂತ್ರೋಪಕರಣ ಕೊಳ್ಳಲು ಸರ್ಕಾರವೇ ಸಹಾಯಧನ ನೀಡುತ್ತಿದೆ. ಇದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿ ಮಾಡಿದೆ.

    ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದ್ದರೆ, ಸಾಮಾನ್ಯ ವರ್ಗದ ರೈತರು ಶೇ.50ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್‌ ಸಹಾಯಧನ ಪಡೆಯಬಹುದಾಗಿದೆ. ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್,

    ಎರಡು ಭಾವಚಿತ್ರ, 100 ರೂಪಾಯಿಯ ಬಾಂಡ್‌ ಪೇಪರ್‌ನೊಂದಿಗೆ ಸ್ಥಳೀಯ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

    https://ainkannada.com/what-is-the-reason-for-buying-gold-like-akshay-trithiya-here-is-the-information/

    2024-25ರ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‌ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ (ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.

    ಇದರೊಂದಿಗೆ  ಕೃಷಿ ಭಾಗ್ಯ ಯೋಜನೆಯಲ್ಲಅರ್ಹ ರೈತರಿಗೆ ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ), ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಸೋಲಾರ್ ಪಂಪ್ ಸೆಟ್(ಅಪ್ ಟು 10 ಹೆಚ್‍ಪಿ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷ್ಮ ನೀರಾವರಿ ಘಟಕಗಳ ಸೌಲಭ್ಯಗಳನ್ನು ಸಾಮಾನ್ಯ ರೈತರಿಗೆ ಶೇ.80ರ ಸಹಾಯಧನದಲ್ಲಿ /ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರ ಸಹಾಯಧನದಲ್ಲಿ ನೀಡಲಾಗುತ್ತದೆ. ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್‌ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು. ಕಳೆದ ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿದ್ದ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ.

    ಸಹಾಯಧನ ಪಡೆಯಲು ಅಗತ್ಯ ದಾಖಲೆಗಳು?

    • ರೈತರ ಜಮೀನಿನ ಪಹಣಿ
    • ಆಧಾರ್ ಕಾರ್ಡ್‌
    • ಬ್ಯಾಂಕ್ ಪಾಸ್ ಬುಕ್
    • ಪಹಣಿ ಜಂಟಿಯಾಗಿದ್ದರೆ ಒಪ್ಪಿಗೆ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕು.
    • ರೈತರು ಫ್ರೂಟ್ಸ್ ಐಡಿ ಹೊಂದಿರಬೇಕು.
    • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
    • ರೈತರು ಯಾವ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಸಲ್ಲಿಸುತ್ತಾರೋ ಆ ಅರ್ಜಿ ಹೊಂದಿರಬೇಕು.

     

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಪಾಕಿಸ್ತಾನ ಒಂದು ಟೆರರ್ ಕಂಪೆನಿ, ಇದಕ್ಕೆ ಬುದ್ಧಿ ಕಲಿಸಬೇಕು: ಛಲವಾದಿ ನಾರಾಯಣಸ್ವಾಮಿ

    May 11, 2025

    ನಮ್ಮ ದಾಳಿಗೆ ಹೆದರಿ ಪಾಕಿಸ್ತಾನ ಅಮೆರಿಕ ಕಾಲು ‌ಹಿಡಿದುಕೊಳ್ತು: ಶೋಭಾ ಕರಂದ್ಲಾಜೆ

    May 11, 2025

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    ಭೂಮಿ ಕಳೆದುಕೊಂಡ ರೈತರ ಪರಿಹಾರ ಮೊತ್ತಕ್ಕೆ GST ವಿಧಿಸುವಂತಿಲ್ಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್‌

    May 11, 2025

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    May 11, 2025

    Mothers Day Special: ಅಮ್ಮಂದಿರ ದಿನಕ್ಕೆ ನಿಮ್ಮ ಪ್ರೀತಿಯ ಅಮ್ಮನಿಗೆ ಹೀಗೆ ಶುಭಾಶಯ ಕೋರಿ!

    May 11, 2025

    ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆಗಳು: ಇಲ್ಲಿದೆ ಚಾರ್ಜ್ ಮಾಡದೆ 50 ವರ್ಷಗಳ ಕಾಲ ಕೆಲಸ ಮಾಡುವ ಬ್ಯಾಟರಿ!

    May 11, 2025

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    May 11, 2025

    ಕದನ ವಿರಾಮ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್‌ ಗೆ ಸಿಎಂ ಸೂಚನೆ

    May 10, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.