ಬೆಂಗಳೂರು:- ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಮೆಜೆಸ್ಟಿಕ್ನಿಂದ ರಾಜ್ಯದ ವಿವಿಧ ಭಾಗಗಳಿಗೆ ಮಾ. 28ರಿಂದ 30ರವರೆಗೆ ಹೆಚ್ಚುವರಿ ಬಸ್ಗಳು ಸಂಚರಿಸದ್ದು, ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್ಗಳು ಲಭ್ಯವಾಗಲಿವೆ. ಮೆಜೆಸ್ಟಿಕ್, ಶಾಂತಿನಗರ, ಸ್ಯಾಟ್ಲೈಟ್, ಪೀಣ್ಯ ಬಸ್ನಿಲ್ದಾಣದಿಂದ ಬಸ್ಗಳ ಕಾರ್ಯಾಚರಣೆ ನಡೆಯಲಿದೆ.
ಹಬ್ಬ ಮುಗಿದ ಬಳಿಕ ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಯಲಿದ್ದು, ಮಾ. 31ರಂದು ವಾಪಸ್ ಬರುವ ಪ್ರಯಾಣಿಕರಿಗೆ ಸರ್ಕಾರಿ ಬಸ್ ವ್ಯವಸ್ಥೆಯಿದೆ. ರಾಜ್ಯದಾದ್ಯಂತ ಹಾಗೂ ಅಂತರರಾಜ್ಯದಿಂದಲೂ ಕೆಎಸ್ಆರ್ಟಿಸಿ ಬಸ್ಗಳು ಲಭ್ಯವಾಗಲಿವೆ.
ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ ಭಾಗಗಳಿಗೆ ಇರಲಿದೆ. ಇನ್ನೂ ಉತ್ತರ ಕರ್ನಾಟಕದ ಹುಬ್ಬಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಹಲವೆಡೆ ಬಸ್ ವ್ಯವಸ್ಥೆ ಇರಲಿದೆ. ಹೊರರಾಜ್ಯಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ವಿಶೇಷ ಬಸ್ಗಳು ಲಭ್ಯವಿರಲಿದೆ.
ಮೈಸೂರು ಭಾಗದ ಎಲ್ಲಾ ಕಡೆಗಳಿಗೆ ಬಸ್ಗಳ ವ್ಯವಸ್ಥೆಯಿರಲಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣ ಭಾಗಗಳಿಗೆ ಬಸ್ಗಳಿರಲಿವೆ.
3.ಶಾಂತಿನಗರ ಬಸ್ ನಿಲ್ದಾಣ
ಈ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆ ಬಸ್ಗಳು ಲಭ್ಯವಿರಲಿದೆ