Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    By AIN AuthorJune 29, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬಿಬಿಎಂಪಿ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಏರ್ಪಡಿಸಿರುವ ವಲಯ ಮಟ್ಟದ ಬೃಹತ್ ಇ-ಖಾತಾ ಮೇಳ ಕಾರ್ಯಕ್ರಮಕ್ಕೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಹಾಗೂ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ ರವರು ಚಾಲನೆ ನೀಡಿದರು.

    * ಬಿಬಿಎಂಪಿ‌ ವ್ಯಾಪ್ತಿಯಲ್ಲಿ‌ ಬರುವ 25 ಲಕ್ಷ ಸ್ವತ್ತುಗಳ ಪೈಕಿ ಈಗಾಗಲೇ 5,34,674 ಸ್ವತ್ತುಗಳಿಗೆ ಖಾತಾದಾರರು ಅಂತಿಮ ಇ-ಖಾತಾವನ್ನು ಪಡೆದಿದ್ದು, ಬಿಬಿಎಂಪಿ e-Khata ವ್ಯವಸ್ಥೆಗೆ ಭಾರತ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಸಂದಿದೆ.

    * ಯಲಹಂಕ ವಲಯದಲ್ಲಿನ ಒಟ್ಟು 2,28,146 ಸ್ವತ್ತು ಗಳ ಪೈಕಿ ಇಲ್ಲಿಯವರೆಗೆ 71,055 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.

    * ಬ್ಯಾಟರಾಯನಪುರ ವಿಭಾಗದಲ್ಲಿನ ಒಟ್ಟು 1,81,135 ಸ್ವತ್ತುಗಳ ಪೈಕಿ 51,289 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.

    * ಇ-ಖಾತಾ ಮೇಳದ‌ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಯಲಹಂಕ ವಲಯದ ಸಹಕಾರ ನಗರ ಆಟದ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ.

    ಅಥವಾ

    * ಬಿಬಿಎಂಪಿ ಎಲ್ಲಾ ವಾರ್ಡ್ ಗಳ ಕಂದಾಯ ಅಧಿಕಾರಿಗಳ ಕಛೇರಿ‌ , ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಇ-ಖಾತಾ ಪಡೆಯಬಹುದು.

    ಅಥವಾ

    * ಜನಸೇವಕರ ಸೇವೆ‌ ಪಡೆದು ಇ-ಖಾತಾ ಅರ್ಜಿ ಸಲ್ಲಿಸಲು 080-49203888 ಗೆ ಕರೆ ಮಾಡಿದರೆ, ತಮ್ಮ ಮನೆಗೆ ಜನ ಸೇವಕರು ಬಂದು ಇ-ಖಾತಾಗೆ ಅರ್ಜಿ ಸಲ್ಲಿಸಲಿದ್ದಾರೆ.

    ಈ ವೇಳೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್.ಎಂ ರೇವಣ್ಣ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!

    June 29, 2025

    ಅತಿಯಾದ ಮೊಬೈಲ್ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಂತೆ!

    June 28, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.