ಬೆಂಗಳೂರು:- ಬಿಬಿಎಂಪಿ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಏರ್ಪಡಿಸಿರುವ ವಲಯ ಮಟ್ಟದ ಬೃಹತ್ ಇ-ಖಾತಾ ಮೇಳ ಕಾರ್ಯಕ್ರಮಕ್ಕೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಹಾಗೂ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ ರವರು ಚಾಲನೆ ನೀಡಿದರು.
* ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 25 ಲಕ್ಷ ಸ್ವತ್ತುಗಳ ಪೈಕಿ ಈಗಾಗಲೇ 5,34,674 ಸ್ವತ್ತುಗಳಿಗೆ ಖಾತಾದಾರರು ಅಂತಿಮ ಇ-ಖಾತಾವನ್ನು ಪಡೆದಿದ್ದು, ಬಿಬಿಎಂಪಿ e-Khata ವ್ಯವಸ್ಥೆಗೆ ಭಾರತ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಸಂದಿದೆ.
* ಯಲಹಂಕ ವಲಯದಲ್ಲಿನ ಒಟ್ಟು 2,28,146 ಸ್ವತ್ತು ಗಳ ಪೈಕಿ ಇಲ್ಲಿಯವರೆಗೆ 71,055 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.
* ಬ್ಯಾಟರಾಯನಪುರ ವಿಭಾಗದಲ್ಲಿನ ಒಟ್ಟು 1,81,135 ಸ್ವತ್ತುಗಳ ಪೈಕಿ 51,289 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.
* ಇ-ಖಾತಾ ಮೇಳದ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಯಲಹಂಕ ವಲಯದ ಸಹಕಾರ ನಗರ ಆಟದ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ.
ಅಥವಾ
* ಬಿಬಿಎಂಪಿ ಎಲ್ಲಾ ವಾರ್ಡ್ ಗಳ ಕಂದಾಯ ಅಧಿಕಾರಿಗಳ ಕಛೇರಿ , ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಇ-ಖಾತಾ ಪಡೆಯಬಹುದು.
ಅಥವಾ
* ಜನಸೇವಕರ ಸೇವೆ ಪಡೆದು ಇ-ಖಾತಾ ಅರ್ಜಿ ಸಲ್ಲಿಸಲು 080-49203888 ಗೆ ಕರೆ ಮಾಡಿದರೆ, ತಮ್ಮ ಮನೆಗೆ ಜನ ಸೇವಕರು ಬಂದು ಇ-ಖಾತಾಗೆ ಅರ್ಜಿ ಸಲ್ಲಿಸಲಿದ್ದಾರೆ.
ಈ ವೇಳೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್.ಎಂ ರೇವಣ್ಣ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.