Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Nigama Mandali: ಶಾಸಕರ ಅಸಮಧಾನಕ್ಕೆ ಬ್ರೇಕ್ ಹಾಕಲು ಸರ್ಕಾರ ಸರ್ಕಸ್: 25 ಶಾಸಕರಿಗೆ ನಿಗಮ ಮಂಡಳಿ ಭಾಗ್ಯ!

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಧಾನ ಶಮನ ಮಾಡಿಸಲು,ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಸರ್ಕಾರ ಮುಂದಾಗಿದೆ.ನಿನ್ನೆ ತಡರಾತ್ರಿಯವರೆಗೂ ಸಿಎಂ,ಡಿಸಿಎಂ ಜೊತೆ ಸುರ್ಜೆವಾಲಾ ಕ್ಲೋಸ್ ಡೋರ್ ಸಭೆ ನಡೆಸಿದ್ರು.ಸಭೆಯಲ್ಲಿ ಮೊದಲ ಹಂತದಲ್ಲಿ 25 ಶಾಸಕರಿಗೆ ಅಧಿಕಾರ ನೀಡುವ ಬಗ್ಗೆ ತೀರ್ಮಾನ ಆಗಿದ್ದು,ಶಾಸಕರ ಅಸಮಧಾನಕ್ಕೆ ಟಾನಿಕ್ ನೀಡಲು ನಾಯಕರು ಮುಂದಾಗಿದೆ.

    ಮುಂದಿನ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನವನ್ನ ಗೆಲ್ಲಬೇಕೆಂದು ಹೊರಟಿರುವ ಕಾಂಗ್ರೆಸ್ ನಾಯಕರಿಗೆ,ಕಾಂಗ್ರೆಸ್ ಶಾಸಕರ ಅಸಮಧಾನವೇ ದೊಡ್ಡ ತಲೆನೋವಾಗಿದೆ.ಈ ಹಿನ್ನಲೆಯಲ್ಲಿ ಶಾಸಕರ ಅಸಮಧಾನಕ್ಕೆ ಬ್ರೇಕ್ ಹಾಕಲು,ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಸರ್ಕಾರ ಮುಂದಾಗಿದೆ.ನಿನ್ನೆ ತಡರಾತ್ರಿಯವರೆಗೂ ಸಿಎಂ,ಡಿಸಿಎಂ ಜೊತೆ ಸುರ್ಜೆವಾಲಾ ಸಭೆ ನೆಡಸಿದ್ರು.ಸಭೆಯಲ್ಲಿ ಮೊದಲ ಹಂತದಲ್ಲಿ 25 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.ಆದ್ರೆ,ಈ ತೀರ್ಮಾನಕ್ಕೆ ಕೆಲ ಹಿರಿಯ ನಾಯಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮತ್ತೊಂದು ಸುತ್ತಿನ ಸಭೆ ಇದೇ ತಿಂಗಳು 28ರಂದು ನಡೆಸಲು ತೀರ್ಮಾನಿಸಲಾಗಿದೆ.

    ಇನ್ನು ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿತ ಶಾಸಕರಿಗೆ ಮಾತ್ರ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗುತ್ತಿದೆ ಎಂಬ ಚರ್ಚೆಗೆ,ಗೃಹ ಸಚಿವ ಜಿ.ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ರು.ಈ ಹಿನ್ನಲೆಯಲ್ಲಿ ಸಿಎಂ ಕಾವೇರಿ ನಿವಾಸಕ್ಕೆ ಇಂದು ಬೆಳಿಗ್ಗೆ ದೌಡಯಿಸಿದ ಜಿ.ಪರಮೇಶ್ವರ್ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡುವಂತೆ ಒತ್ತಡ ಹಾಕಿದ್ದಾರೆ.ಸಭೆ ಬಳಿಕ ಪರಮೇಶ್ವರ್ ಗೆ ಯಾವುದೇ ಅಸಮಧಾನ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಇನ್ನು ಅಸಮಾಧಾನಗೊಂಡ ಶಾಸಕರನ್ನ ವಿಶ್ವಾಸಕ್ಕೆ ತೆಗದುಕೊಳ್ಳಲು ನಿನ್ನೆ ಖುದ್ದು ಸುರ್ಜೆವಾಲಾ ಕೆಲ ಶಾಸಕರ ಜೊತೆ ದೂರವಾಣಿ ಮಾತನಾಡಿ,ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದರು. ಇನ್ನು ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ.ಇನ್ನು ನಿಗಮ ಮಂಡಳಿಗೆ ರೇಸ್ ನಲ್ಲಿ ಯಾರ್ಯಾರು ಶಾಸಕರು ಇದ್ದಾರೆ ಅನ್ನೋದನ್ನ ನೋಡೋದಾದ್ರೆ..

    ಎಂ.ಕೃಷ್ಣಪ್ಪ- ವಿಜಯನಗರ ಕ್ಷೇತ್ರ
    ಹ್ಯಾರೀಸ್,ಶಾಂತಿನಗರ ಕ್ಷೇತ್ರ
    ಬಿ.ಆರ್.ಪಾಟೀಲ್,ಆಳಂದ ಕ್ಷೇತ್ರ
    ವಿನಯ್ ಕುಲಕರ್ಣಿ,ಧಾರವಾಡ ಕ್ಷೇತ್ರ
    ವಿಜಯಾನಂದ ಕಾಶಪ್ಪ,ಹುನಗುಂದ ಕ್ಷೇತ್ರ
    ನರೇಂದ್ರ ಸ್ವಾಮಿ,ಮಳವಳ್ಳಿ ಕ್ಷೇತ್ರ
    ನಂಜೇಗೌಡ,ಮಾಲೂರು ಕ್ಷೇತ್ರ
    ಬಿ.ಕೆ.ಸಂಗಮೇಶ್,ಭದ್ರಾವತಿ ಕ್ಷೇತ್ರ
    ಬೇಳೂರು ಗೋಪಾಲಕೃಷ್ಣ,ಸಾಗರ ಕ್ಷೇತ್ರ
    ಬಿಜಿ ಗೋವಿಂದಪ್ಪ,ಹೊಸದುರ್ಗ ಕ್ಷೇತ್ರ
    ಪ್ರಸಾದ್ ಅಬ್ಬಯ್ಯ,ಹು-ಧಾ ಪೂರ್ವ ಕ್ಷೇತ್ರ
    ಶಿವಲಿಂಗೇಗೌಡ,ಅರಸೀಕೆರೆ ಕ್ಷೇತ್ರ
    ರಘುಮೂರ್ತಿ,ಚಳ್ಳಕೆರೆ ಕ್ಷೇತ್ರ
    ರಾಜೇಗೌಡ,ಶೃಂಗೇರಿ ಕ್ಷೇತ್ರ
    ನಾರಾಯಣಸ್ವಾಮಿ,ಬಂಗಾರಪೇಟೆ ಕ್ಷೇತ್ರ
    ರಾಘವೇಂದ್ರ ಹಿಟ್ನಾಳ್,ಕೊಪ್ಪಳ ಕ್ಷೇತ್ರ

    ಒಟ್ನಲ್ಲಿ,ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗು ಅಸಮಧಾನಿತ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ-ಮಾನ ನೀಡುವ ಮೂಲಕ,ಶಾಸಕರ ಅಸಮಧಾನ ಶಮನ ಮಾಡಲು ಸರ್ಕಾರ ಮುಂದಾಗಿದೆ.ಇದು ಎಷ್ಟರ ಮಟ್ಟಿಗೆ ವರ್ಕ್ ಔಟ್ ಆಗಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!

    June 8, 2025

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!

    June 8, 2025

    ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

    June 8, 2025

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.