Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿಸಿಎಂ ಡಿ.ಕೆ. ಶಿವಕುಮಾರ್

    By Author AINJune 21, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: “2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.

    “ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ” ಎಂದು ತಿಳಿಸಿದರು.

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    “ಈ ಯೋಜನೆಯಲ್ಲಿ ಮಾರ್ಪಾಟು ಮಾಡಿರುವ ಅಂಶಗಳು, ಸಚಿವರುಗಳ ಸಲಹೆಗಳನ್ನು ನೀಡಿದ್ದಾರೆ. ಇಲ್ಲಿ ಕೆಲವು ತಾಂತ್ರಿಕ ಅಂಶಗಳು ಕೂಡ ಇವೆ. ಎಲ್ಲವನ್ನು ಅಧ್ಯಯನ ಮಾಡಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಬೇರೆ ಯೋಜನೆಗಳು ವಿಳಂಬವಾದರೂ ಚಿಂತೆಯಿಲ್ಲ, ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಸಿಎಂ ನನಗೆ ನಿರ್ದೇಶನ ನೀಡಿದ್ದಾರೆ” ಎಂದು ಹೇಳಿದರು.

    ಶಾಸಕರ ಹೇಳಿಕೆ ಖಂಡಿಸುತ್ತೇನೆ

    ಶಾಸಕ ಬಿ.ಆರ್ ಪಾಟೀಲ್ ಅವರು ಆಡಿಯೋದಲ್ಲಿ ಮಾಡಿರುವ ಆರೋಪ ನಿಜ ಎಂದು ಪುನರುಚ್ಚರಿಸಿದ್ದಾರೆ ಎಂದು ಕೇಳಿದಾಗ, “ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ. ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಅವರು ಈ ವಿಚಾರವಾಗಿ ಕ್ರಮ ಕೈಗೊಳ್ಳಲಿದ್ದಾರೆ. ಪಾರದರ್ಶಕವಾಗಿ ವಸತಿ ಹಂಚಿಕೆಯಾಗುವಾಗ ಫಲಾನುಭವಿ ಹಣ ನೀಡಲು ಹೇಗೆ ಸಾಧ್ಯ? ವಸತಿ ಹಂಚುವ ನಿರ್ಧಾರ ತೆಗೆದುಕೊಳ್ಳುವವರು ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳು. ಶಾಸಕರು ಯಾವ ಉದ್ದೇಶದಲ್ಲಿ ಹೇಳಿದ್ದಾರೋ ಇದು ಸರಿ ಇಲ್ಲ. ನಾನಿದನ್ನು ಖಂಡಿಸುತ್ತೇನೆ. ನಮ್ಮ ಸರ್ಕಾರದಲ್ಲಿ ಇಂತಹ ವಿಚಾರ ಇಲ್ಲ. ಈ ವಿಚಾರವಾಗಿ ನಾನು ಹಾಗೂ ಸಿಎಂ, ಶಾಸಕರ ಜೊತೆ ಮಾತನಾಡುತ್ತೇವೆ” ಎಂದು ತಿಳಿಸಿದರು.

    ಕಾಲವೇ ಉತ್ತರ ಕೊಡಲಿದೆ

    ಮೇಕೆದಾಟು ಪಾದಯಾತ್ರೆ ವಿಚಾರವಾಗಿ ನಮಗೆ ಆಹ್ವಾನ ನೀಡಿಲ್ಲ, ಹೀಗಾಗಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಹೇಳಿರುವುದು ಸರಿಯಲ್ಲ ಎಂಬ ನಟ ಸುದೀಪ್ ಹೇಳಿಕೆ ಬಗ್ಗೆ ಕೇಳಿದಾಗ, “ಈಗ ನಾನು ಈ ವಿಚಾರವಾಗಿ ಉತ್ತರ ನೀಡುವುದಿಲ್ಲ. ನಾನು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ಆಹ್ವಾನ ನೀಡಿದ್ದೇನೆ. ಮಾಧ್ಯಮಗಳ ದಾಖಲೆಗಳಲ್ಲಿ ಎಲ್ಲವೂ ಇದೆ. ಕಾಲವೇ ಉತ್ತರ ನೀಡಲಿದೆ” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಉತ್ಸಾಹದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದ ಮೆಡಿಕವರ್ ಆಸ್ಪತ್ರೆ

    June 21, 2025

    ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ರೆ 7 ವರ್ಷಗಳ ಜೈಲು ಶಿಕ್ಷೆ! ದಂಡವೆಷ್ಟು ಗೊತ್ತಾ..?

    June 21, 2025

    ಅಂತಾರಾಷ್ಟ್ರೀಯ ಯೋಗ ದಿನ: ವಿಜಯೇಂದ್ರ, ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗಿ

    June 21, 2025

    ಮನೆ ಹಂಚಿಕೆಗೆ ಲಂಚ ಪ್ರಕರಣ: ಆಡಿಯೋ ಲೀಕ್ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು..?

    June 21, 2025

    ಮಳೆಗಾಲದಲ್ಲಿ ಬಟ್ಟೆ ಬೇಗ ಒಣಗುತ್ತಿಲ್ವಾ..? ಹಾಗಾದ್ರೆ ಬೇಗನೆ ಒಣಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!

    June 21, 2025

    ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:

    June 21, 2025

    ಮಡಿಕೇರಿಯ ಗೌಡ ಸಮಾಜದಲ್ಲಿ 11 ನೇ ಯೋಗ ದಿನಾಚರಣೆ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.