ಹುಬ್ಬಳ್ಳಿ:- ಹಾಲಿನ ದರ ಏರಿಕೆಯ ಮೂಲಕ ಸರ್ಕಾರ ಆರನೇ ಭಾಗ್ಯ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ವ್ಯಂಗ್ಯವಾಡಿದರು.
ಬಳ್ಳಾರಿ: ಎಲ್ಎಲ್ಸಿ ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಬಾಲಕ ಸಾವು, ಮತ್ತಿಬ್ಬರು ರಕ್ಷಣೆ!
ಈ ಸಂಬಂಧ ಮಾತನಾಡಿದ ಅವರು, ಸರ್ಕಾರ ಒಂದು ಕಡೆ ಹಾಲಿನ ದರ ಪ್ರತಿ ಲೀಟರ್ಗೆ 4 ರೂ. ಏರಿಸಲು ನಿರ್ಧರಿಸಿದೆ. ಮತ್ತೊಂದು ಕಡೆ ವಿದ್ಯುತ್ ದರ ಏರಿಕೆಗೂ ಮುಂದಾಗಿದೆ. ಇದರ ನಡುವೆ ನೋಂದಣಿ ಸೇರಿ ಹಲವಾರು ಶುಲ್ಕಗಳ ಏರಿಕೆ ಮಾಡಿದೆ ಎಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಸರ್ಕಾರ ದರ ಏರಿಕೆಯ ಗ್ಯಾರಂಟಿಗಳನ್ನು ಕೊಡುತ್ತಲೇ ಸಾಗಿದೆ. ಕೂಡಲೇ ಹಾಲಿನ ದರ ಏರಿಕೆ ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದರು