ರಾಯಚೂರಿನಲ್ಲಿ ಹಲವೆಡೆ ಆಲಿಕಲ್ಲು ಮಳೆ, ಭತ್ತದ ಬೆಳೆ ಹಾನಿ

ರಾಯಚೂರು : ಜಿಲ್ಲೆಯ ಮಸ್ಕಿ  ತಾಲೂಕಿನಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಆಲಿಕಲ್ಲು‌ ಮಳೆಯಾಗಿದ್ದು, ಭತ್ತದ ಬೆಳೆ ಹಾನಿಯಾಗಿದೆ. ಕಟಾವಿಗೆ ಬಂದಿದ್ದ ಭತ್ತದ ಬೆಳೆ ಇದೀಗ ಹಾನಿಗೊಳಗಾಗಿದ್ದು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೆಲವೆಡೆ ಗದ್ದೆಯಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆಲಿಕಲ್ಲು ಮಳೆಗೆ ಗೌಡನಬಾವಿ, ಸಾಗರ ಕ್ಯಾಂಪ್, ಬೆಳ್ಳಿಗನೂರು ಗ್ರಾಮದಲ್ಲಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ. ಒಣಗಿರುವ ಭತ್ತದ  ಕಾಳು ನೆಲಕ್ಕೆ ಬಿದ್ದು ಮೊಳಕೆ … Continue reading ರಾಯಚೂರಿನಲ್ಲಿ ಹಲವೆಡೆ ಆಲಿಕಲ್ಲು ಮಳೆ, ಭತ್ತದ ಬೆಳೆ ಹಾನಿ