ವಿಜಯಪುರ:- ಸಾಲಗಾರರ ಕಿರುಕುಳಕ್ಕೆ ಬೇಸತ್ತ ಯುವಕನೋರ್ವ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಜೆಪಿ ಭವನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ & ಬಾಬುಜಗಜೀವನರಾಂ ಜಯಂತಿ ಆಚರಣೆ: TA ಶರವಣ ಭಾಗಿ!
ವಿಜಯಪುರ ನಗರದ ಆದರ್ಶ ನಗರ ಬಡಾವಣೆಯ ನಿವಾಸಿ ಶೋಬಿತ ಬಳ್ಳೂಳಗಿಡದ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ, ಬಡ್ಡಿ ರೂಪದಲ್ಲಿ ಹಾಗೂ ಕ್ರೆಡಿಟ್ ಕಾರ್ಡ್ ಮೂಲಕ ಯುವಕ ಸಾಲ ಮಾಡಿದ್ದ.
ಸಾಲ ಹೆಚ್ಚಾಗಿ ಮಾಡಿಕೊಂಡ ಕಾರಣ ಯುವಕನ ತಂದೆಗೂ ಸಾಲ ಪಾವತಿಸುವಂತೆ ಸಾಲಗಾರರು ನಿತ್ಯ ಕಿರುಕುಳ ಕೊಡುತ್ತಿದ್ದರು. ಈ ಕಿರುಕುಳದ ಬಗ್ಗೆ ಆದರ್ಶ ನಗರ ಪೊಲೀಸರಿಗೆ ಯುವಕ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸಾಲಗಾರರ ಕಿರುಕುಳದ ಬಗ್ಗೆ ವಿಡಿಯೋ ಮಾಡಿ ಬಳಿಕ ಯುವಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಯುವಕ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ.
ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.