ಹಾಸನ:- ಹಾಸನದಲ್ಲಿ ಹೃದಯಾಘಾತ ಸರಣಿ ಸಾವು ಮುಂದುವರಿದಿದ್ದು, ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಎಕ್ಸ್’ಟ್ರಾ ಟೀ ಕಪ್ ಕೊಡದಿದ್ದಕ್ಕೆ ಕಿರಿಕ್: ಕಾಫಿ ಶಾಪ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್!
ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಾವು:
ಹೃದಯಾಘಾತದಿಂದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಾವನ್ನಪ್ಪಿದ್ದಾರೆ. ಸಂತೋಷ್ (40) ವರ್ಷ ಮೃತ ಯುವಕ. ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದಲ್ಲಿ ಘಟನೆ ಜರುಗಿದೆ. ಮಲಗಿದ್ದಾಗಲೇ ಬೆಳಗ್ಗಿನ ಜಾವ 5 ಗಂಟೆಯಲ್ಲಿ ಹೃದಯಾಘಾತ ಸಂಭವಿಸಿದೆ.
ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದ ಸಂತೋಷ್ ಸಮಾಜ ಸೇವಕರಾಗಿದ್ದರು. ಇವರ ಅಗಲಿಕೆಯಿಂದ ಗ್ರಾಮದಲ್ಲಿ ಮೌನ ಆವರಿಸಿದೆ.
70 ವರ್ಷದ ವೃದ್ಧ ಸಾವು:
ಹೃದಯಾಘಾತದಿಂದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಚಿಕ್ಕನಾಯಕನಹಳ್ಳಿ ಜರುಗಿದೆ. ಸಿ. ಬಿ ವಿರುಪಾಕ್ಷ (70) ಮೃತ ವ್ಯಕ್ತಿ. ಕಳೆದ ರಾತ್ರಿ 11:30 ರಲ್ಲಿ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬದವರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ದುರಾದೃಷ್ಟವಶಾತ್ ಮಾರ್ಗ ಮಧ್ಯೆ ವಿರೂಪಾಕ್ಷ ಸಾವನ್ನಪ್ಪಿದ್ದಾರೆ. ಇದರಿಂದ 42 ದಿನಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಮತ ಪಟ್ಟವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.