ಕೊಡಗು:- ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹೀಗಾಗಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು!
ಜು.07ರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಕೊಡಗು ಡಿಸಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನೂ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಲು ಸಾಲು ಅವಾಂತರಗಳೇ ಸೃಷ್ಟಿಯಾಗುತ್ತಿವೆ. ಮಳೆಹಾನಿ ಪ್ರದೇಶಗಳಲ್ಲಿ ಜನರ ಒದ್ದಾಟ ಹೇಳತೀರದಾಗಿದೆ. ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿವೆ.