ಬೆಂಗಳೂರು:- ಕರ್ನಾಟಕದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ರಾಜ್ಯಕ್ಕೆ ಮೇ 27ಕ್ಕೆ ಮುಂಗಾರು ಪ್ರವೇಶವಾಗಲಿದೆ. ಮುಂಗಾರು ಪ್ರವೇಶಕ್ಕೆ ಮುನ್ನವೇ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಗಳೂರಿಗೆ ಮತ್ತೆ ಮಹಾ ಮಳೆಯ ಮುನ್ಸೂಚನೆ ಸಿಕ್ಕಿದ್ದು ಇಂದು ನಾಳೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
ಇಂದು, ನಾಳೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದರೆ ಇಂದು, ನಾಳೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿಯಾಗಿದೆ. ಮೇ 21, 27ರಂದು ಬಾಗಲಕೋಟೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದರೆ ಮೇ 21ರಿಂದ 27ರವರೆಗೆ ಬೆಳಗಾವಿಯಲ್ಲಿ ಮಳೆ ಸುರಿಯಲಿದೆ.
ಮೇ 22, 23ರವರೆಗೆ ಬೀದರ್, ಮೇ 21ರಿಂದ 27ರವರೆಗೆ ಧಾರವಾಡ, ಮೇ 21, 22ರಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.