ಬೆಂಗಳೂರು:- ಭಾರೀ ಮಳೆಯಿಂದ ಈಗಾಗಲೇ ಕರ್ನಾಟಕ ರಾಜ್ಯದ ಎಲ್ಲಾ ಡ್ಯಾಂ ಅಂದ್ರೆ ಕನ್ನಡಿಗರ ಜೀವನಾಡಿ ಜಲಾಶಯಗಳು ತುಂಬಿ ತುಳುಕುತ್ತಿವೆ. ಭಾರಿ ಮಳೆ ಬೀಳುವ ಜಾಗ ಮಲೆನಾಡು ಮಾತ್ರವಲ್ಲದೆ, ದಕ್ಷಿಣ ಕರ್ನಾಟಕ & ಉತ್ತರ ಕರ್ನಾಟಕದ ಬಹುತೇಕ ಎಲ್ಲಾ ಜಲಾಶಯಗಳು ಜೂನ್ ತಿಂಗಳಲ್ಲೇ ತುಂಬಿ ತುಳುಕುತ್ತಾ ಖುಷಿ ನೀಡುತ್ತಿವೆ. ಇಂತಹ ಸಮಯದಲ್ಲೇ, ಜುಲೈ 2 ಬುಧವಾರ ನಂತರ ಭಾರಿ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!
ಕಳೆದೆರೆಡು ವಾರದಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಹವಾಮಾನ ಇಲಾಖೆ ಮಳೆ ಮೂನ್ಸುಚನೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಮಳೆಯಾಗುವ ಬಗ್ಗೆ ಸಾಧ್ಯತೆಯಿದೆ ಎಂದು ಎಚ್ಚರಿಕೆ ಕೊಟ್ಟಿದೆ.
ನಾಳೆ ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಜು.2ರಿಂದ 5ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.