ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೊರೇಷನ್, ಶಾಂತಿ ನಗರ, ಮೆಜೆಸ್ಟಿಕ್, ಮೈಸೂರ್ ಬ್ಯಾಂಕ್, ಟೌನ್ಹಾಲ್, ರಿಚ್ಮಂಡ್ ಟೌನ್, ಜಯನಗರ ಸೇರಿದಂತೆ ಹಲವೆಡೆ ಮಳೆ ಆಗಿದೆ.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆ ವಿಧಾನಸೌಧದ ಬಳಿ ಹಾಕಲಾಗಿದ್ದ ಪೆಂಡಾಲ್ ಕೆಳಗೆ ಜನರು ಆಶ್ರಯ ಪಡೆದಿದ್ದಾರೆ. ಇನ್ನು ರಜೆ ಹಿನ್ನಲೆ ವಿಧಾನಸೌಧ, ಕಬ್ಬನ್ ಪಾರ್ಕ್ ನೋಡಲು ಬಂದಿದ್ದ ಸಾರ್ವಜನಿಕರು ಮಳೆಯಿಂದ ಪರದಾಡುವಂತಾಗಿದೆ.
ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ. ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿತ್ತು.