ಗುವಾಹಟಿ:- ಭಾರೀ ಮಳೆಯ ಪರಿಣಾಮ ಮೇಘಾಲಯ ಹಾಗೂ ಅಸ್ಸಾಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಈಶಾನ್ಯ ಭಾಗದಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿದೆ.
ಗೋಲ್ಡ್ ಪ್ರಿಯರ ಗಮನಕ್ಕೆ: ಶುದ್ಧ ಚಿನ್ನದ ಬೆಲೆ ಎಷ್ಟು ಗೊತ್ತಾ!? ಇಂದಿನ ದರಪಟ್ಟಿ ಇಲ್ಲಿದೆ!
ರಾಷ್ಟ್ರೀಯ ಹೆದ್ದಾರಿ-17ರ ತುರಾ ಮತ್ತು ಗುವಾಹಟಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಹಲವಾರು ಟ್ರಕ್ಗಳು ಮತ್ತು ಘನ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.
2 ದಿನಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಅಸ್ಸಾಂನಲ್ಲಿ 8 ಮಂದಿ, ಅರುಣಾಚಲ ಪ್ರದೇಶದಲ್ಲಿ 9 ಮಂದಿ ಸೇರಿ ಒಟ್ಟು 30 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಅಸ್ಸಾಂನ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 12 ಜಿಲ್ಲೆಗಳು ಪ್ರವಾಹ ಹಾಗೂ ಭೂಕುಸಿತದಿಂದ ನಷ್ಟ ಅನುಭವಿಸಿದೆ.
ಮಳೆಯ ಪರಿಣಾಮ ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ- 13ರಲ್ಲಿ ಭೂಕುಸಿತ ಸಂಭವಿಸಿದೆ.