ಮಂಡ್ಯ:– ಮಂಡ್ಯದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್ಎಸ್ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಯಾವುದೇ ಸಮಯದಲ್ಲಾದರೂ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ ಕೊಡಲಾಗಿದೆ.
ಸುಮಾರು 5 ಸಾವಿರ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದ್ದು, 5 ರಿಂದ 15 ಸಾವಿರ ಕ್ಯೂಸೆಕ್ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ. ನದಿ ಪಾತ್ರದ ಜನರಲ್ಲಿ ಮುಂಜಾಗ್ರತಾ ಕ್ರಮ ವಹಿಸುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ಕೊಟ್ಟಿದೆ. ನದಿಯ ದಂಡೆಯ ಆಸ್ತಿ-ಪಾಸ್ತಿ ರಕ್ಷಣೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.