ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಜಿಲ್ಲೆಯ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಾ. ಇಂದು ಒಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ
ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ-ಮಳೆ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಒಂದು ದಿನಕ್ಕೆ ಸೀಮಿತವಾಗಿ ರಜೆ ಘೋಷಿಸಲಾಗಿದೆ. ಅಂಗನವಾಡಿಗೆ ಸಂಬಂಧಿಸಿದಂತೆ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ಟಿಹೆಚ್ಆರ್ ರೂಪದಲ್ಲಿ ಫಲಾನುಭವಿಗಳಿಗೆ ಮನೆಗೆ ವಿತರಿಸಲು ಕ್ರಮ ವಹಿಸುಲಾಗುವುದು.ಜೊತೆಗೆ ದ್ವಿತೀಯ ಪಿಯು ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅದೇಶದಲ್ಲಿ ತಿಳಿಸಿದ್ದಾರೆ