ಚಿಕ್ಕಮಗಳೂರು:- ಪ್ರೀತಿಸಿ ಮದುವೆಯಾಗಿದ್ದವಳನ್ನು ಕೊಂದು ತಲೆಮರೆಸಿಕೊಂಡಿದ್ದ ಪಾಪಿ ಪತಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. 32 ವರ್ಷದ ಅವಿನಾಶ್ ಬಂಧಿತ ಆರೋಪಿ. ಅವಿನಾಶ್, ಕೀರ್ತಿ ಯನ್ನು 4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಬುಧವಾರ ಬೆಳಗ್ಗೆ ಇವರಿಬ್ಬರ ಮಧ್ಯೆ ಜಗಳ ಏರ್ಪಟ್ಟು, ಪತ್ನಿ ಕೀರ್ತಿಯನ್ನ ಅವಿನಾಶ್ ಚಾಕುವಿನಿಂದ ಹತ್ತಕ್ಕೂ ಹೆಚ್ಚು ಬಾರಿ ಇರಿದಿದ್ದ.
ಪ್ರಕೃತಿ ವಿಕೋಪ ಪ್ರದೇಶಗಳಿಗೆ ಡಾ. ಸಿದ್ದಲಿಂಗಯ್ಯ ಹಿರೇಮಠ ಭೇಟಿ: ಮಳೆ ಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ!
ಪತಿಯಿಂದ ಚಾಕು ಇರಿತಕ್ಕೊಳಗಾದ ಕೀರ್ತಿ ರಕ್ತದ ಮಡುವಿನಲ್ಲೇ ಮನೆಯಿಂದ ಓಡಿ ಬಂದು ನಡು ರಸ್ತೆಯಲ್ಲಿ ಕೂಗಿಕೊಂಡು ಬಿದ್ದಿದ್ದಳು. ಕೂಡಲೇ ಆಕೆಯನ್ನು ಪೋಷಕರು ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅವಿನಾಶ್, ಮನಸೋ ಇಚ್ಛೆ ಚಾಕುವಿನಿಂದ ಹಲ್ಲೆ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು
ಕೀರ್ತಿಗೆ ಚಾಕುವಿನಿಂದ ಇರಿದ ಅವಿನಾಶ್, ಬಳಿಕ ಮುಳ್ಳಯ್ಯನಗಿರಿ ಕಾಡಿನಲ್ಲಿ ನಾಪತ್ತೆಯಾಗಿದ್ದ. ಇದೀಗ ಆತನನ್ನು ಅರೆಸ್ಟ್ ಮಾಡಲಾಗಿದೆ.