ಚಿತ್ರದುರ್ಗ:- ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ.
RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?
ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ,ಗಂಗಮ್ಮ,ಹಂಸಿಕ,ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ.
ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.