ಚಾಮರಾಜನಗರ : ಚಾಮರಾಜನಗರ ತಾಲೂಕಿನ ಮಾದಾಪುರ ಸಮೀಪದ ಬುಧವಾರ ಅಪಘಾತದಲ್ಲಿ ಬೆಂಗಳೂರು ಮೂಲದ ಸುಬ್ರಹ್ಮಣ್ಯ ಎಂಬುವರು ಮೃತಪಟ್ಟಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೈಕ್ನಲ್ಲಿ ಬರುವಾಗ నిಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಮೃತಟ್ಟರು. ಅಪಘಾತದಲ್ಲಿ ಧೃತಿ ಹಾಗೂ ಧಾತ್ರಿ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತದೇಹವನ್ನು ಸಿಮ್ಸ್ನಲ್ಲಿ ಇರಿಸಲಾಗಿದ್ದು, ಚಾಮರಾಜನಗರ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾಸ್ ಟ್ಯಾಂಕರ್ ಸ್ಫೋಟ
ಇನ್ನೊಂದೆಡೆ ಚಿತ್ರದುರ್ಗದ ಜಿಆರ್ ಹಳ್ಳಿ ಗ್ರಾಮದಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆಯಿಲ್ ತುಂಬಿ ಕೊಂಡು ಹೋಗುತ್ತಿದ್ದ ಲಾರಿ ಗ್ಯಾಸ್ ಬಂಕ್ ಬಳಿ ಘಟನೆ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.