ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಐದು ವರ್ಷದ ಮಗುವನ್ನು ಬಿಹಾರಿ ಕಾಮುಕನೊಬ್ಬ ಹೊತ್ತೊಯ್ದು ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದನು. ಇದು ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನೂ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಇನ್ನೇರಡು ದಿನಗಳಲ್ಲಿ ಸಿಐಡಿ ತನಿಖೆ ಆರಂಭಿಸುವ ಸಾಧ್ಯತೆ ಇದೆ.
ಇನ್ನು, ಪ್ರಕರಣದ ತನಿಖೆಗಾಗಿ ತಜ್ಞರ ತಂಡ ರಚಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಪಿಐಎಲ್ ಸಲ್ಲಿಸಿದೆ. ಎನ್ಕೌಂಟರ್ನಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ದೂರವಾಣಿ ಕರೆ ವಿವರ (ಸಿಡಿಆರ್) ಪರಿಶೀಲಿಸಬೇಕು.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ವೈರ್ಲೆಸ್ ಲಾಗ್ ಬುಕ್ ಪರಿಶೀಲನೆಗೆ ನಿರ್ದೇಶಿಸಲು ಮನವಿ ಮಾಡಿದೆ. ಮೃತನ ದೇಹದ ಅಂತ್ಯಕ್ರಿಯೆ ಮಾಡದಂತೆ ತಡೆಗೆ ಮತ್ತು ಸಾಕ್ಷ್ಯನಾಶ ಆಗದಂತೆ ಕ್ರಮಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಂಡಿದೆ.
ಬಿಹಾರದ ಪಟ್ನಾ ನಿವಾಸಿಯಾದ ರಿತೇಶ್ ಕುಮಾರ್ (35) ಈ ಹತ್ಯೆಯ ಆರೋಪಿಯಾಗಿದ್ದು, ಈತ ಎರಡ್ಮೂರು ತಿಂಗಳ ಹಿಂದೆ ಹುಬ್ಬಳ್ಳಿಗೆ ಬಂದಿದ್ದನು. ತಾರಿಹಾಳ ಸೇತುವೆ ಬಳಿಯಿರೋ ಮನೆಯಲ್ಲಿ ವಾಸವಾಗಿದ್ದ ಬಗ್ಗೆ ಮಾಹಿತಿ ನೀಡಿದ್ದನು.
ಮಾಹಿತಿ ಪರಿಶೀಲಿಸಲು ಹೋದಾಗ ಪೊಲೀಸರ ಮೇಲೆಯೇ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಮಹಿಳಾ ಪಿಎಸ್ ಐ ಅನ್ನಪೂರ್ಣ ಏರ್ ಪೈರ್ ಮಾಡಿದ್ದಾರೆ. ಗುಂಡು ಆತನ ಕಾಲಿಗೆ ಮತ್ತು ಬೆನ್ನಿಗೆ ಗುಂಡು ತಗುಲಿದೆ. ಆತನ ಜೀವ ಉಳಿಸಲು ಕಿಮ್ಸ್ ಗೆ ರವಾನೆ ಮಾಡಲಾಗಿತ್ತು. ಕಿಮ್ಸ್ ಗೆ ಬಂದಾಗ ವೈದ್ಯರು ಮೃತಪಟ್ಟ ಮಾಹಿತಿ ನೀಡಿದ್ದಾರೆ.