Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಂತಹ ಪುಢಾರಿಗಳಿಗೆ ಹೆದರುವ ಮಗ ನಾನಲ್ಲ: ಕಾಂಗ್ರೆಸ್ ಗೆ ಹೆಚ್ ಡಿ ಕುಮಾರಸ್ವಾಮಿ ಟಾಂಗ್!

    By AIN AuthorApril 12, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸಿ, ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

    ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

    ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು.

    ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ ಎಂದರು.

    ಕಾಂಗ್ರೆಸ್ ಪಕ್ಷದ ಪುಢಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾನು ಹೆದರುವ ವ್ಯಕ್ತಿ ಅಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿರುವ ದಾಖಲೆಗಳನ್ನು ಬಿಚ್ಚಿಟ್ಟರೆ ಜನರೇ ಇವರನ್ನು ಓಡಿಸುತ್ತಾರೆ ಎಂದು ಕೇಂದ್ರ ಸಚಿವರು ಎಚ್ಚರಿಕೆ ನೀಡಿದರು.

    ಟನ್ ಗಟ್ಟಲೆ ದಾಖಲೆ ಇದೆ ಅಂತ ಹೇಳಿದ್ದೆ, ಅದೇನು ಸುಳ್ಳಲ್ಲ. ಅಕ್ಷರಶಃ ಸತ್ಯ. ಹಿಂದೆ ಅಧಿಕಾರದಲ್ಲಿದ್ದಾಗ ನನ್ನ ಧ್ವನಿ ಅಡಗಿಸುವ ಕೆಲಸ ಮಾಡಿದ್ದರು. ನನ್ನ ತೊಡವಿಕೊಂಡರೆ ಅವರಿಗೆ ಕಷ್ಟ. ನಾನು ಯಾವುದೇ ಕಾನೂನು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ನ್ಯಾಯ, ಕೋರ್ಟ್ ಇದೆ ಎಂದು ಹೋರಾಟ ಮಾಡುತ್ತಿದ್ದೇನೆ. ನನ್ನಲ್ಲಿ ಅಧಿಕಾರ ಇದ್ದಾಗಲೂ ನಾನು ನನ್ನ ಕೆಲಸ ಮಾಡಿಕೊಳ್ಳಲಿಲ್ಲ. ಈಗ ಕೇಂದ್ರ ಸಚಿವನಾಗಿದ್ದಾಗಲೂ ಕಾಂಗ್ರೆಸ್​ನವರು ನನಗೆ ಕಿರುಕುಳ ನೀಡುತ್ತಿದ್ದಾರೆ. ಅದಕ್ಕೆ ಹೆದರಲ್ಲ ನಾನು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮ ಪಕ್ಷ ಬಲವಾಗಿದೆ. ಕಾರ್ಯಕರ್ತರು ಹೆದರಬೇಕಿಲ್ಲ. ನಾವು ಮುಂದೆ ಅಧಿಕಾರಕ್ಕೆ ಬರುತ್ತೇವೆ. ಈ ಸರ್ಕಾರ, ಇವರ ಮಂತ್ರಿಗಳು ಬೆಂಗಳೂರು ನಗರದಲ್ಲಿ ಏನೆಲ್ಲಾ ಅಕ್ರಮ ಮಾಡ್ತಿದ್ದಾರೆ ಎಂದು ನೋಡಿದ್ದೇವೆ. ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಹಲವಾರು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ. ಸರ್ಕಾರ ಮಾತ್ರ ರೈತರ ನೆರವಿಗೆ ಧಾವಿಸಿದೆ ಪ್ರತಿಪಕ್ಷಗಳನ್ನು ಹತ್ತಿಕ್ಕುವ ರಾಜಕೀಯ ಮಾಡುತ್ತಿದೆ. ನಾವು ಈ ಸರ್ಕಾರದ ವಿರುದ್ಧ ಹೋರಾಟ ನಡೆಸೋಣ ಎಂದು ಕೇಂದ್ರ ಸಚಿವರು ಕರೆ ನೀಡಿದರು.

    ಇನ್ನೆರಡು ತಿಂಗಳಲ್ಲಿ ಈ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಲಿದೆ. ಕರ್ನಾಟಕದಲ್ಲಿ.ಇಂತ ಕೆಟ್ಟ ಸರ್ಕಾರ ಎಂದೂ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ. ನಮ್ಮ ಪಕ್ಷದ 16 ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇಂಥ ಪಕ್ಷವನ್ನು ಸರ್ವನಾಶ ಮಾಡಲು ಸಂಚು ಮಾಡಿದ್ದರು. ಆ ಸಂಚನ್ನು ವಿಫಲ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ.

    ಬೆಲೆ ಏರಿಕೆಗೆ ಒಂದು ಮಿತಿ ಬೇಡವೇ? ದರ ಏರಿಕೆ ಎಂದರೆ ಸುಲಿಗೆ. ಕೆಂಪೇಗೌಡರು ದೂರದೃಷ್ಟಿಯಿಂದ ಕಟ್ಟಿದ್ದ ಈ ನಗರವನ್ನು ಸುಲಿಗೆಗೆ ಕೇಂದ್ರ ಸ್ಥಾನ ಮಾಡಿಕೊಂಡಿದ್ದಾರೆ. ದೇವರೇ ಬಂದರೂ ಈ ನಗರವನ್ನು ಸರಿಮಾಡಲು ಆಗಲ್ಲ ಎಂದು ಸ್ವತಃ ಡಿಸಿಎಂ ಅವರೇ ಹೇಳಿದ್ದಾರೆ. ಗ್ಯಾರಂಟಿ ಹೆಸರು ಹೇಳಿಕೊಂಡು ಬಂದ ಇವರು, ಈಗ ಜನರನ್ನು ಕಿತ್ತು ತಿನ್ನುತ್ತಿದ್ದಾರೆ. ನುಡಿದಂತೆ ನಡೆದಿದ್ದೇವೆ ಅಂತಾರೆ, ಹಾಗೆಂದರೆ ಜನರನ್ನು ಕಿತ್ತು ತಿನ್ನುವುದಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು

    ನನ್ನ ಮೇಲೆ ಗಣಿ ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ. ತಮ್ಮ ವಿರುದ್ಧ ಬಂದಿರುವ ಆರೋಪಕ್ಕೆ ಅವರು ಏನು ಹೇಳುತ್ತಾರೆ? ರಾಮಮೂರ್ತಿ ಗೌಡ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಪ್ರಾಸಿಕ್ಯೂಷನ್ ಕೊಡಿ ಅಂತ ರಾಜ್ಯಪಾಲರ ಕೇಳಿದ್ದಾರೆ.

    ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಸಿಎಂ ಆಗಿದ್ದ ಸಂದರ್ಭದಲ್ಲಿ ಗಣಿ ಗುತ್ತಿಗೆ ನವೀಕರಣಕ್ಕೆ ₹500 ಕೋಟಿ ಕಿಕ್‌ಬ್ಯಾಕ್‌ ಪಡೆದಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಗಣಿ ಗುತ್ತಿಗೆ ನವೀಕರಣದಿಂದ ಸರಕಾರದ ಬೊಕ್ಕಸಕ್ಕೆ 5,000 ಕೋಟಿ ರೂ. ನಷ್ಟ ಉಂಟು ಮಾಡಿರುವ ಗಂಭೀರ ಆಪಾದನೆಯನ್ನು ಸಿದ್ದರಾಮಯ್ಯ ಎದುರಿಸುತ್ತಿದ್ದಾರೆ. ವಿಚಾರಣೆಗೆ ಅನುಮತಿ ನೀಡುವಂತೆ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆನಪ್ಪ ಉತ್ತರ ಕೊಡುತ್ತೀರಿ ಎಂದು ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.