ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು. ಥಗ್ ಲೈಫ್ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಈ ಮಾತು ಹೇಳಿದ ನಟ ಕಮಲ್ ಹಾಸನ್ ಅವರು ಕನ್ನಡಿಗರನ್ನು ಕೆಣಕಿದ್ದಾರೆ. ನಟ ಶಿವರಾಜ್ ಕುಮಾರ್ ಮುಂದೆಯೇ ತಮಿಳಿನಿಂದ ಕನ್ನಡ ಹುಟ್ಟಿದೆ ಅಂತ ಹೇಳೋ ಮೂಲಕ ಕನ್ನಡಿಗರ ಹೋರಾಟಕ್ಕೆ ಕಿಚ್ಚು ಹಚ್ಚಿದ್ದಾರೆ.
ಇದೀಗ ಮತ್ತೆ ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ ಚೆನ್ನೈನಲ್ಲಿ ಈ ಬಗ್ಗೆ ಮಾತನಾಡಿರುವ ನಟ ಕಮಲ್ ಹಾಸನ್, ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು. ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಅದಾದ 24 ಗಂಟೆಯೊಳಗೆ ಕಮಲ್ ಹಾಸನ್, ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.