ಬೆಂಗಳೂರು:- ಬುಧವಾರ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆರ್ಸಿಬಿ ವಿಜಯಯಾತ್ರೆಯನ್ನು ನೋಡಲು ಆಗಮಿಸಿದ್ದ ಲಕ್ಷಾಂತರ ಜನರ ನಡುವೆ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಆರ್ಸಿಬಿಯ ಸಂಭ್ರಮಾಚರಣೆಯನ್ನು ಮಾಡಬೇಕಾಗಿದ್ದ ಕರ್ನಾಟಕದಲ್ಲಿ ಸೂತಕದ ಛಾಯೆ ಆವರಿಸಿತ್ತು. ಇದಾದ ನಂತರ ಕರ್ನಾಟಕ ಸರ್ಕಾರದ ವೈಫಲ್ಯದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ನಿನ್ನೆ ನಡೆದ ದುರಂತದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಹಾಗೇ, ಸಿಐಡಿ ತನಿಖೆಗೂ ಆದೇಶಿಸಿದೆ. ಇದೆಲ್ಲದರ ನಡುವೆ ತನ್ನ ವೈಫಲ್ಯವನ್ನು ಮರೆಮಾಚಿಕೊಳ್ಳುವ ಪ್ರಯತ್ನ ಮಾಡಿರುವ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ದಯಾನಂದ್ ಸಸ್ಪೆಂಡ್: ಪೊಲೀಸ್ ಇತಿಹಾಸದಲ್ಲೇ ಇದು ಕರಾಳ ದಿನ – ಭಾಸ್ಕರ್ ರಾವ್ ಆಕ್ರೋಶ!
ಇದೀಗ ಬಿ ದಯಾನಂದ್ ಅವರ ಅಮಾನತು ಖಂಡಿಸಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪೋಸ್ಟ್ ಗಳು ವೈರಲ್ ಆಗುತ್ತಿದೆ. ಸರ್ಕಾರದ ನಿರ್ಧಾರದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ. ದಯಾನಂದ್ ಗೆ ಬೆಂಬಲಿಸಿ ಹಲವು ಪೋಸ್ಟ್ ಗಳು ವೈರಲ್ ಆಗುತ್ತಿದೆ. ಕಮೀಷನರ್ ಆಗಿದ್ದ ವೇಳೆ ದಯಾನಂದ್ ಕಾರ್ಯವೈಖರಿಗೆ ಮೆಚ್ಚುಗೆ ಇದೆ. ದಕ್ಷತೆ, ಸಮಯ ಪ್ರಜ್ಞೆ ಬಗ್ಗೆ ಮೆಚ್ಚುಗೆ ಮತ್ತು ವ್ಯಾಪಕ ಪ್ರೋತ್ಸಾಹ ವ್ಯಕ್ತವಾಗಿದೆ. ಇಂತಹ ನಿಷ್ಠಾವಂತ ಅಧಿಕಾರಿಯ ಅಮಾನತು ಸರಿಯಲ್ಲ. ಕೂಡಲೇ ದಯಾನಂದ್ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯ ಕೇಳಿ ಬಂದಿದೆ.
I Stand with B Dayanand IPS ಎಂಬರ್ಥದ ಪೋಸ್ಟ್ ಗಳು ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.