ಬೆಂಗಳೂರು:- ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂಬ ನಟ ಕಮಲ್ ಹಾಸನ್ ಹೇಳಿಕೆ ಕುರಿತಂತೆ ಶಿವರಾಜ್ ತಂಗಡಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,ಕಮಲ್ ಹಾಸನ್ ಮಾತಾಡಿದ್ದು ತಪ್ಪು. ಕನ್ನಡ ನೆಲ, ಜಲದ ವಿಷಯ ಯಾರೇ ಮಾತನಾಡಿದರೂ ಸಹಿಸೋಕೆ ಆಗಲ್ಲ. ಕಮಲ್ ಹಾಸನ್ ತಕ್ಷಣ ರಾಜ್ಯದ ಜನರ ಕ್ಷಮೆ ಕೇಳಬೇಕು. ಕನ್ನಡಿಗರ ಕ್ಷಮೆ ಕೇಳಬೇಕು. ಕಮಲ್ ಹಾಸನ್ ಕ್ಷಮೆ ಕೇಳದೇ ಹೋದರೆ ನಾನೇ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು ಅವರಿಗೆ ಮತ್ತು ಅವರ ಚಿತ್ರಕ್ಕೆ ನಿಷೇಧ ಹಾಕಬೇಕು ಎಂದು ಆಗ್ರಹ ಮಾಡುತ್ತೇನೆ ಎಂದರು.
ಕನ್ನಡದ ಬಗ್ಗೆ ಹಗುರವಾಗಿ ಮಾತಾಡೋದು ಬಿಟ್ಟು ಕ್ಷಮೆ ಕೇಳಬೇಕು. ಹೀಗೆ ಮಾತಾಡಿ ಗಾಯಕ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಅದರಂತೆ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಅವರು ಕ್ಷಮೆ ಕೇಳದೇ ಹೋದರೇ ಅವರನ್ನ ಬ್ಯಾನ್ ಮಾಡಬೇಕು ಎಂದಿದ್ದಾರೆ.