ಮಂಡ್ಯ: ಸರ್ಕಾರಿ ಜಮೀನು ಪರಭಾರೆ ವಿಚಾರದಲ್ಲಿ ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಧಮ್ಕಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಸಾಬ್ರ ಹೆಸ್ರರಿಗೆ ಏನಾದ್ರು ಪರಭಾರೆ ಮಾಡಿದ್ರೆ ನೇಣಿಗೆ ಹಾಕುವುದಾಗಿ ಶಾಸಕನಿಂದ ಧಮ್ಕಿ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ,
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಬಹಿರಂಗವಾಗಿ ಧಮ್ಮಿ ಹಾಕಲಾಗಿದ್ದು, ಇದುವರೆಗೂ ಮುಸ್ಲಿಂರ ಪರ ಇದ್ದ ಶಾಸಕ ಇದೀಗ ಸಾಬ್ರು ಎಂದು ಉಲ್ಟಾ ಹೊಡೆದಿದ್ದು,
ಕೈ ಶಾಸಕ ಸಾಬ್ರು ಹೆಸರ ಬಳಸಿ ಹೇಳಿರೋ ವಿರೋಧದ ಹೇಳಿಕೆಯೂ ಯಕ್ಷಪ್ರಶ್ನೆಗೆ ಕಾರಣವಾಗಿದೆ. ಯಾರಾದ್ರು ಅದನ್ನ ಸಾಬ್ರು ಹೆಸ್ರಿಗೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.