ನವದೆಹಲಿ:– ಕೇಂದ್ರದ ನಿರ್ಧಾರ ಸ್ವಾಗತ..ಜನರ ಜಾತಿಗಣತಿ ಆಗ್ಲಿ, ಆದರೆ ಅಧಿಕಾರಿಗಳ ಗಣತಿ ಆಗಬಾರದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅನುಮಾನಾಸ್ಪದವಾಗಿ ವಿದೇಶಿ ಮಹಿಳೆ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!
ಕೇಂದ್ರ ಸರ್ಕಾರದ ಜಾತಿ ಜನಗಣತಿ ನಿರ್ಧಾರ ತಡವಾದರೂ ನಾನು ಇದನ್ನೂ ಸ್ವಾಗತ ಮಾಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ಸಮಯದಲ್ಲೇ ಜಾತಿ ಜನಗಣತಿ ಯಾಕೆ ಘೋಷಣೆ ನಿರ್ಧಾರ ಯಾಕೆ ಮಾಡಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇದು ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು. ಇದನ್ನು ಹೇಗೆ ಮಾಡ್ತಾರೆ ಎಂದು ಹೇಳಬೇಕು ಎಂದರು
ಜಾತಿಗಣತಿ ಹಾಗೂ ಜನಗಣತಿಗೆ ಅವಧಿ, ಸಮಯ ನಿರ್ಧಾರ ಮಾಡಬೇಕು. ಬಜೆಟ್ನಲ್ಲಿ ಹಣವನ್ನು ನಿಗದಿಪಡಿಸಬೇಕು. ಬಜೆಟ್ನ್ನು ಹಣ ತೆಗೆದಿರಿಸುವ ಬಗ್ಗೆ ಮಾಹಿತಿ ನೀಡಬೇಕು. ನಮ್ಮ ಆಗ್ರಹ, ಒತ್ತಡಕ್ಕೆ ಪ್ರಧಾನಿ ಮೋದಿ ಅವರು ಸ್ಪಂದಿಸಿದಕ್ಕೆ ಅವರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.
ನಮ್ಮ ಪಕ್ಷ ಸಮೀಕ್ಷೆಗೆ ಆಗ್ರಹಿಸಿ ದೇಶದಲ್ಲೆಡೆ ಅಭಿಯಾನ ಆರಂಭಿಸಿದ್ದೆವು. ಜಾತಿಗಣತಿಯಿಂದಾಗಿ ಅಭಿವೃದ್ದಿಗೆ ಹಲವು ದಾರಿಗಳು ತೆರಯುತ್ತವೆ. ಕರ್ನಾಟಕದ ಜಾತಿಗಣತಿ ಮುಂದಿನ ದಿನಗಳಲ್ಲಿ ಮಾದರಿಯಾಗಲಿದೆ. ಪ್ರಧಾನಿ ಮೋದಿ ಕೈಗೊಂಡ ನಿರ್ಧಾರ ಮಹತ್ವದಾಗಿದೆ ಎಂದರು
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರ ಮನೆಗಳಿಗೆ ತೆರಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಉಗ್ರರು ಮಾನವೀಯತೆ ಇಲ್ಲದೇ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಇದು ಹೇಗೆ ಆಯ್ತು ಅಂತಾ ಕೇಳಲ್ಲ. ಯಾರು ಇದನ್ನು ಮಾಡಿದ್ದಾರೆ. ಎಲ್ಲಿದ್ದಾರೆ, ಯಾರೇ ಆಗಿದ್ದರು ಅವರಿಗೆ ಸೂಕ್ತ ತಿರುಗೇಟು ನೀಡಬೇಕು. ಭಾರತದ ಜೊತೆಗೆ ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ನೆನಪಿರಬೇಕು ಎಂದರು.