ಬೆಂಗಳೂರು: ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದ್ರೆ ಹೊಸ ಪಕ್ಷದ ಬಗ್ಗೆ ಚಿಂತಿಸ್ತೀವಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಹೇಳಿದ್ರು ಹೊಸ ಪಕ್ಷ ಕಟ್ಟುತ್ತೇವೆ ಅಂತಾ? ನಾವು ಮೊದಲು ಸರ್ವೇ ಮಾಡುತ್ತೇವೆ. ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದರೆ ಹೊಸ ಪಕ್ಷದ ಬಗ್ಗೆ ಚಿಂತನೆ ಮಾಡುತ್ತೇವೆ.
ಈ ಕೆಟ್ಟ ಕುಟುಂಬ ತೆಗೆದರೆ ಮಾತ್ರ ಬಿಜೆಪಿಗೆ ಕರ್ನಾಟಕದಲ್ಲಿ ಭವಿಷ್ಯ ಇದೆ. ಇವರು ಭ್ರಷ್ಟಾಚಾರದಲ್ಲಿ ಇದ್ದಾರೆ. ಕೊರೊನಾ, ಡಿ-ನೋಟಿಫಿಕೇಶನ್ ಹಗರಣ ಇದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾತಾಡಲು ಇವರಿಗೇನು ನೈತಿಕತೆ ಇದೆ. ವಿಜಯೇಂದ್ರ ಚೇಲಾಗಳು ಯತ್ನಾಳ್ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಾರೆ.
ಮಧುಮೇಹಿಗಳ ಗಮನಕ್ಕೆ: ಶುಗರ್ ಕಂಟ್ರೋಲ್ ಮಾಡಲು ಖಾಲಿ ಹೊಟ್ಟೆಗೆ ಈ ಒಣ ಹಣ್ಣು ಸೇವಿಸಿ!
ಡಿಕೆಶಿ ಕೊಟ್ಟ ಭಿಕ್ಷೆಯಿಂದ ಶಾಸಕ ಆಗಿರೋದು. ಹಾಗಾಗಿ ಮೊದಲು ವಿಜಯೇಂದ್ರ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಶಿಕಾರಿಪುರದಿಂದ ಆರಿಸಿ ಬರಲಿ. ಚೇಲಾಗಳ ಕೈಯಲ್ಲಿ ಹೇಳಿಸುವುದನ್ನು ಬಿಟ್ಟು ಧಮ್ ಇದ್ದರೆ ವಿಜಯೇಂದ್ರ ನನ್ನ ಎದುರಿಗೆ ಮಾತಾಡಲಿ, 4 ಚೇಲಾಗಳನ್ನ ಇಟ್ಟುಕೊಂಡು ಹಂದಿಗಳಿಂದ ಮಾತಾಡಿಸಬೇಡ ಎಂದು ಕಿಡಿಕಾರಿದರು.