ಬೆಂಗಳೂರು‘:- ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಗೌಡ ಯತ್ನಾಳ್ ಪರ ಪಂಚಮಸಾಲಿ ಶ್ರೀಗಳು ನಿಂತಿರುವುದು ವ್ಯಾಪಾಕ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂಸಾಚಾರಕ್ಕೆ ತಿರುಗಿದ ಮುಸ್ಲಿಂರ ವಕ್ಫ್ ಪ್ರತಿಭಟನೆ: ರೈಲುಗಳ ಮೇಲೆ ಕಲ್ಲು ತೂರಾಟ!
ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಸದಸ್ಯರು, ಯಾವುದೇ ರಾಜಕೀಯ ಪಕ್ಷದ ಪರವಾಗಿ, ವ್ಯಕ್ತಿ ಪರವಾಗಿ ಮಾತನಾಡದಂತೆ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಮನವಿ ಮಾಡಿದ್ದೇವೆ. ಒಂದು ವೇಳೆ ಮಾತನಾಡಿದರೆ, ಪೀಠದಿಂದ ಸ್ವಾಮೀಜಿ ಉಚ್ಛಾಟನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಹೇಳಿದ್ದೆವು ಎಂದು ತಿಳಿಸಿದರು..
ಮುಂದಿನ ವಾರದಲ್ಲಿ ಮತ್ತೆ ಸಭೆ ನಡೆಸುತ್ತೇವೆ. ಅಷ್ಟರಲ್ಲಿ ಸ್ವಾಮೀಜಿಯವರ ವರ್ತನೆ ಬದಲಾವಣೆಯಾಗದಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಟ್ರಸ್ಟ್ನ ನಿಯಮಗಳ ವಿರುದ್ಧ ನಡೆದುಕೊಂಡರೆ ಅವರನ್ನು ಪೀಠದಿಂದ ಕೆಳಗೆ ಇಳಿಸುವ ಅಧಿಕಾರ ಟ್ರಸ್ಟ್ಗೆ ಇದೆ ಎಂದು ಹೇಳಿದರು.