ಗದಗ: ಸಿಎಂಗೆ ಬರೆದ ಪತ್ರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಗರಂ ಆದ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪತ್ರದ ಉದ್ದೇಶ, ನನ್ನ ಪತ್ರ ಯಾವ ಕಾರಣಕ್ಕೆ ಅನ್ನೋದರ ಬಗ್ಗೆ ಸುದೀರ್ಘವಾಗಿ ಬರೆದಿದ್ದೇನೆ. ಇಂತಹ ಮಾತುಗಳನ್ನು ಮೊದಲು ಬಿಡಿ ಎಂದು HDKಗೆ ಸಚಿವ ಎಚ್ ಕೆ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆ ಕುರಿತು ಎಲ್ಲ ವಿವರಗಳೊಂದಿಗೆ ಸುದೀರ್ಘವಾಗಿ ಪತ್ರ ಬರೆದಿದ್ದೇನೆ. ಈ ಪತ್ರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕುಂಬಕರ್ಣ, ರಾವಣ ಎಂಬ ಪೌರಾಣಿಕ ಸನ್ನಿವೇಶವನ್ನು ಪಾತ್ರಗಳ ಹೆಸರನ್ನು ತೆಗೆದುಕೊಂಡು ಪತ್ರವನ್ನು ಕಸದ ಬುಟ್ಟಿ ಎಸೆಯಬೇಕು ಎಂದು ಹೇಳಿದ್ದಾರೆ. ಆ ಪತ್ರ ಕಸದ ಬುಟ್ಟಿಗೋ, ಕ್ರಮದ ತೊಟ್ಟಿಗೋ ಎಂಬುದನ್ನು ಯಾರಿಗೆ ಪತ್ರ ಬರೆದಿದ್ದೀನೋ ಅವರು ಅದನ್ನು ನಿರ್ಣಯಿಸುತ್ತಾರೆ ಎಂದು ಹೇಳಿದ್ದಾರೆ.
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
ಸಿಎಂ ಸಿದ್ದರಾಮಯ್ಯಸಿಎಂ ಆಗಿದ್ದಾಗ ಕಣ್ಣು ಮುಚ್ಚಿ ಕುಳಿತಿದ್ದರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೀವು ಸಿಎಂ ಆಗಿದ್ದಾಗ ಅಕ್ರಮದ ವರದಿಗಳು ನಿಮ್ಮ ಕೈಯಲ್ಲಿದ್ದವು, ನೀವು ಅಭಿಷೇಕ ಮಾಡುತ್ತ ಕುಳಿತ್ತಿದ್ರಾ..? ಎಂದು ಮರು ಪ್ರಶ್ನಿಸಿದ್ದಾರೆ.
ಇನ್ನೂ ಒಂದೂವರೆ ಲಕ್ಷ ಕೋಟಿ ಮೊತ್ತದ ಅಕ್ರಮ ಗಣಿಗಾರಿಕೆ ಸಂಪತ್ತು ಕನ್ನಡಿಗರಿಗೆ ವಾಪಾಸ್ ತರಬೇಕೆನ್ನುವುದು ನನ್ನ ಪತ್ರದ ಉದ್ದೇಶವಾಗಿದೆ. ಕುಮಾರಸ್ವಾಮಿ ಅವರೇ ನೀವು ದೊಡ್ಡ ಸ್ಥಾನದಲ್ಲಿದ್ದಿರಿ. ವ್ಯವಸ್ಥೆಗೆ ಸವಾಲಾಗಿರುವ ಅಕ್ರಮ ಲೂಟಿ ಗುನ್ನೆಯಿಂದ ನಷ್ಟವಾಗಿರುವ ಅಮೂಲ್ಯವಾಗಿರುವ ಸಂಪತ್ತು. ಹಾಗೂ ಅದರ ಮೌಲ್ಯವನ್ನು ಕನ್ನಡಿಗರಿಗೆ ವಾಪಸ್ ತರಲು ಅಡಿ ಇಡಿ ಎಂದು ಹೇಳಿದ್ದಾರೆ.