ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮಾಣಿಕೇಶ್ವರ ಗ್ರಾಮದಲ್ಲಿ ಮಾಂಜ್ರಾ ನದಿಯಲ್ಲಿ ಮರಳು ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರಚಾಲಿತ ದೋಣಿಯನ್ನು ಜಪ್ತಿ ಮಾಡಿದ ಅಧಿಕಾರಿಗಳು ಅದಕ್ಕೆ ಬೆಂಕಿ ಹಚ್ಚಿ ಯಂತ್ರಚಾಲಿತ ದೋಣಿಯನ್ನು ನಾಶಪಡಿಸಿದ್ದಾರೆ.
ಡಿವೈಎಸ್ಪಿ ಶಿವಾನಂದ ಪಾವಡಶೆಟ್ಟಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಿರಿಯ ವಿಜ್ಞಾನಿ ಧನರಾಜ ಬಲ್ಲೂರಕರ ಅವರ ನೇತೃತ್ವದ ತಂಡ ಮಾಂಜ್ರಾ ನದಿಗೆ ಭೇಟಿ ನೀಡಿ, ಯಂತ್ರಚಾಲಿತ ದೋಣಿಯೊಂದನ್ನು ಜಪ್ತಿ ಮಾಡಿದೆ. ಮತ್ತೊಂದು ದೋಣಿಗೆ ಬೆಂಕಿ ಹಚ್ಚಿ ನಾಶಪಡಿಸಿದೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಹಲವು ದಿನಗಳಿಂದ ಅಕ್ರಮ ಮರಳು ದಂಧೆಕೋರರ ಕುರಿತು ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯಾರಾದರೂ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದರೆ ಅಂತಹವರ ಬಗ್ಗೆ ಮಾಹಿತಿ ನೀಡಿ, ಪೊಲೀಸರಿಗೆ ಸಹಕಾರ ನೀಡಬೇಕು’ ಎಂದು ಡಿವೈಎಸ್ಪಿ ಶಿವಾನಂದ ಪಾವಡಶೆಟ್ಟಿ ಮನವಿ ಮಾಡಿದ್ದಾರೆ.
ಈ ಸಂಧರ್ಭದಲ್ಲಿ ಭೂ ವಿಜ್ಞಾನಿ ಲೋಕೇಶ, ಸಿಪಿಐ ಹನುಮರೆಡ್ಡಿ, ಪಿಎಸ್ಐ ಶಿವಕುಮಾರ ಬಳತೆ ಸೇರಿ ಹಲವರು ಸಿಬ್ಬಂದಿ ಹಾಜರಿದ್ದರು.ಘಟನೆಗೆ ಸಂಬಂಧಿಸಿದಂತೆ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.