ಬೆಂಗಳೂರು: ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆಯಾಗಿರುವ ಘಟನೆ ಸಿಲಕಾನ್ ಸಿಟಿ ಬೆಮಗಳೂರಿನ ಪೂರ್ಣ ಪ್ರಜ್ಞಾಲೇಔಟ್ ಹೋಟೆಲ್ ಓಯೋ ರೂಮ್’ನಲ್ಲಿನಡೆದಿದೆ. ಹರಿಣಿ (36) ಕೊಲೆಯಾದ ಪ್ರಿಯತಮೆಯಾಗಿದ್ದು, ಟೆಕ್ಕಿ ಯಶಸ್ (25) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಇಬ್ಬರೂ ಕೆಂಗೇರಿ ನಿವಾಸಿಗಳಾಗಿದ್ದು, ಕಳೆದ ಆರು ವರ್ಷಗಳಿಂದ ಇಬ್ಬರಿಗೂ ಪರಿಚಯ ಇದ್ದು, ಕಳೆದ ಒಂದು ವರ್ಷದಿಂದ ಕ್ಲೋಸ್ ಆಗಿದ್ದರು. ಆದರೆ ಹರಿಣಿಗೆ ಈಗಾಗ್ಲೇ ಮದುವೆಯಾಗಿ ಎರಡು ಮಕ್ಕಳಿದ್ದವು. ಅಷ್ಟೇ ಅಲ್ಲದೇ ಅನೈತಿಕ ಸಂಬಂಧದ ವಿಷಯ ಗೊತ್ತಾಗಿ ಹರಿಣಿ ಪತಿಪ್ರಿಯಕರ್ ಯಶಸ್ ಗೆ ವಾರ್ನಿಂಗ್ ಕೂಡ ಮಾಡಿದ್ದರು.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ಬಳಿಕ ಪ್ರಿಯಕರ ಯಶಸ್ ಕೊಲೆ ಮಾಡುವ ಉದ್ದೇಶದಿಂದಲೇ ಓಯೋ ರೂಂಗೆ ಕರೆಸಿಕೊಂಡು ದೇಹದ ವಿವಿಧ ಭಾಗಗಳಿಗೆ 17 ಬಾರಿ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಕೊಲೆ ಮಾಡಿರುವುದಾಗಿ ಕೆಂಗೇರಿ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಶಸ್ ನನ್ನು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ ಎರಡು ಬಾರಿ ಆತಹತ್ಯೆಗೆ ಯತ್ನಿಸಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.