ಹುಬ್ಬಳ್ಳಿ:ಭಾರತಕ್ಕೆ ಕೊವಿಡ್ ಬಂದ ನಂತರ ಹೃದಯಾಘಾತ ಹೆಚ್ಚಾಗುತ್ತಿದೆ ಅನ್ನೊ ಮಾಹಿತಿ ನಾವು ಕೇಳಿದ್ದೇವೆ ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಮಾತ್ರವಲ್ಲದೇ ದೇಶದ ವಿವಿಧೆಡೆಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳು ಹೃದಯಾಘಾತ ಹೆಚ್ಚುತ್ತಿವೆ. ಇಂತಹ ಸಾವಿನ ಹಿಂದಿನ ಸತ್ಯವನ್ನು ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದ್ಯರು ಸತ್ಯ ಕಂಡು ಹಿಡಿಯಲು ಮುಂದಾಗಿದ್ದು , ಚಿಕ್ಕ ವಯಸ್ಸಿನ ಮಕ್ಕಳು ಈ ಕಾಯಲೆ ಬರಲು ಕಾರಣ ಹುಡಕಲು ಪ್ರಾರಂಭ ಮಾಡಿ ಇಂದು ಹೃದಯಾಘಾತದಿಂದ ಮೃತಪಡಲು ನಿಖರ ಕಾರಣವನ್ನು ಪತ್ತೆ ಹಚ್ಚಿದ್ದು, ಈ ವರದಿಯಲ್ಲಿ ವೈದ್ಯಕೀಯ ಲೋಕದಲ್ಲೆ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ.
ಕಾರಣ ಹೇಗೆ ಹುಡಕಿದರು?:
ವಿದ್ಯಾಕಾಶಿ ಧಾರವಾಡ ಆಯ್ಕೆ ಹಿಂದೆ ಇರುವ ಕಾರಣ?
ಧಾರವಾಡ ಜಿಲ್ಲೆಯ ಆರು ಶಾಲೆಗಳ 8 ಮತ್ತು 9ನೇ ತರಗತಿಯಲ್ಲಿ ಓದುತ್ತಿರುವ ತೂಕ ಹೆಚ್ಚಿರುವ ಸುಮಾರು 30 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಅವರನ್ನು ಕೆಎಂಸಿ ಆರ್ ಐ ಆಸ್ಪತ್ರೆಯ ಬಹುವಿಭಾಗೀಯ ಸಂಶೋಧನಾ ಘಟಕದ ನೋಡಲ್ ಅಧಿಕಾರಿ ಡಾ. ರಾಮ ಕೌಲಗುಡ್ಡ, ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮಂಜುನಾಥ ನೇಕಾರ, ವಿಜ್ಞಾನಿಗಳಾದ ಡಾ. ಶಿವಕುಮಾರ ಬೇಲೂರ ಮತ್ತು ಡಾ. ಅರುಣ ಶೆಟ್ಟರ ಅವರ ತಂಡ ವಿವಿಧ ರೀತಿಯ ತಪಾಸಣೆಗೆ ಒಳಪಡಿಸಿದ್ದರು.
30 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳಲ್ಲಿ ಅಸಹಜತೆಗಳು ಪತ್ತೆಯಾಗಿವೆ. ಅಲ್ಲದೇ ಬಹುತೇಕ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, 11 ವಿದ್ಯಾರ್ಥಿಗಳಲ್ಲಿ ಟ್ರೈಗ್ಲಿಸರೈಡ್ ಹೆಚ್ಚಿರುವುದು, ಹೋಮೊಸಿಸ್ಟೈನ್ 4 ವಿದ್ಯಾರ್ಥಿಗಳಲ್ಲಿ ಲಿಪೊಪ್ರೋಟೀನ್ ಹೆಚ್ಚಾಗಿರುವುದು ಹೀಗೆ ವಿವಿಧ ತೊಂದರೆಗಳು ಕಂಡುಬಂದಿವೆ.
ಸರ್ಕಾರಕ್ಕೆ ವರದಿ ಸಲ್ಲಿಕೆ:
ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಆಯುರ್ ವಿಜ್ಞಾನ ಸಂಸ್ಥೆಗೆ, ಶಿಕ್ಷಣ ಇಲಾಖೆ ಸಚಿವರಿಗೆ, ಆರೋಗ್ಯ ಇಲಾಖೆ ಸಚಿವರಿಗೆ ವರದಿಯನ್ನು ಸಲ್ಲಿಕೆ ಮಾಡಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮಕ್ಕಳಿಗೆ ಪಠ್ಯೇತರ ಚಟುವಟಿಕೆಯಲ್ಲಿ ಹೆಚ್ಚು ಪಾಲ್ಗೊಳ್ಳುವಂತೆ ಮಾಡಲು ಶಿಕ್ಷಣ ಇಲಾಖೆ ಎಲ್ಲ ಶಾಲಾ-ಕಾಲೇಜುಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಕುರಿತಂತೆ ಡಾ. ರಾಮ ಕೌಲಗುಡ್ಡ ಅವರು ಪ್ರತಿಕ್ರಿಯಿಸಿ, ಚಿಕ್ಕಮಕ್ಕಳು ಹೆಚ್ಚಾಗಿ ಯಾಕೆ ಹೃದಯಾಘಾತಕ್ಕೆ ಒಳಗಾಗುತ್ತಾರೆ ಎಂಬ ಬಗ್ಗೆ ದೇಶದಲ್ಲಿಯೇ ಕೆಎಂಸಿ ಆರ್ ಪ್ರಥ. ಅಧ್ಯಯನ ಮಾಡಿದೆ. ಇಲ್ಲಿಯವರೆಗೂ ಈ ಬಗ್ಗೆ ಅಧ್ಯಯನಗಳು ಆಗಿರಲಿಲ್ಲ. ಹೀಗಾಗಿ ಇದಕ್ಕೆ ಕಾರಣ ಏನು ಎಂದು ಹುಡುಕಲು ನಾವು ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಸಂಶೋಧನೆ ಮಾಡಿದ್ದೇವೆ. ಧಾರವಾಡ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿಯ 6 ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಶಾಲೆಯ ಆಡಳಿತ ಮಂಡಳಿ ಹಾಗೂ ಕುಟುಂಬಸ್ಥರ ಅನುಮತಿ ಪಡೆದು ನಾನಾ ವಿಧಗಳಲ್ಲಿ ಸಂಶೋಧನೆ ಮಾಡಿದ್ದು, 8 ರಿಂದ 10 ನೇತರಗತಿ ಮಕ್ಕಳಲ್ಲಿ ಹೆಚ್ಚು ತೂಕದ ಮೂವರನ್ನು ಪರೀಕ್ಷೆಗೆ ಒಳಪಡಿಸಿದಾಗ ಆಘಾತಕಾರಿ ಅಂಶಗಳು ಪತ್ತೆಯಾಗಿವೆ. ಅತೀ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಬಿಪಿ, ಶುಗರ್ ಸೇರಿದಂತೆ ನಾನಾ ಆರೋಗ್ಯ ಸಮಸ್ಯೆ ಪತ್ತೆಯಾಗಿವೆ.
ವಿವಿಧ ತಪಾಸಣೆ ಮಾಡಲು ಪ್ರತಿ ವಿದ್ಯಾರ್ಥಿಗೆ 5 ಸಾವಿರ ರೂ. ವೆಚ್ಚ ತಗಲುತ್ತದೆ. ಇದು ಸರ್ಕಾರದ ಮಟ್ಟದಲ್ಲಿ ನೀತಿ ರೂಪದಲ್ಲಿಯೇ ಅನುಷ್ಠಾನವಾದರೆ ಖಂಡಿತವಾಗಿ ಮಕ್ಕಳಲ್ಲಿನ ಹೃದಯಾಘಾತ ತಡೆಗಟ್ಟಬಹುದು ಎನ್ನುವುದು ವೈದ್ಯರ ಅಭಿಪ್ರಾಯವಾಗಿದೆ. ಅಧ್ಯಯನಕ್ಕೆ ಒಳಪಟ್ಟ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು ಹೃದಯಾಘಾತಕ್ಕೆ ಕಾರಣವಾಗುವ ಅಂಶಗಳನ್ನು ಹೊಂದಿದ್ದಾರೆ ಎಂಬುದು ಗೊತ್ತಾಗಿದ್ದು, ಆ ಬಗ್ಗೆ ಅವರನ್ನು ಕೌನ್ಸೆಲಿಂಗ್ಗೂ ಒಳಪಡಿಸಲಾಗಿದೆ. ಈ ವಿದ್ಯಾರ್ಥಿಗಳಲ್ಲಿ ಬೊಜ್ಜು ಹೆಚ್ಚಿರಲು, ದೈಹಿಕ ಚಟುವಟಿಕೆ ಇಲ್ಲದೇ ಇರುವುದು ಪ್ರತಿನಿತ್ಯ ಶಾಲೆಗೆ ಹೋಗುವುದು ಹಾಗೂ ಮನೆಗೆ ಹೋಗುವುದಷ್ಟನ್ನೇ ಮಾಡುತ್ತಿದ್ದರು. ಮನೆಯಲ್ಲಾಗಲಿ, ಶಾಲೆಯಲ್ಲಾಗಲಿ ಮಕ್ಕಳು ದೈಹಿಕ ಶ್ರಮದ ಆಟವನ್ನೇ ಆಡುತ್ತಿರಲಿಲ್ಲ. ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗದೆ ಇರುವದು. ಮಕ್ಕಳು ಪ್ರತಿ ದಿನ ಒಂದು ಗಂಟೆಯಿಂದ ನಾಲ್ಕು ಗಂಟೆವರಗೆ ಮೊಬೈಲ್ ನೋಡುತ್ತಿದ್ದರು. ಜೊತೆಗೆ ಅವರ ಆಹಾರ ಕ್ರಮ ಕೂಡಾ ಸರಿಯಾಗಿರಲಿಲ್ಲ. ಅಸಹಜತೆ ಕಂಡುಬಂದ ವಿದ್ಯಾರ್ಥಿಗಳ ಪರೀಕ್ಷಾ ವರದಿಯನ್ನು ಅವರ ಹೆತ್ತವರಿಗೆ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಿಗೆ ಕಳುಹಿಸಿ ಕೊಡಲಾಗಿದೆ. ಅವರ ದೈನಂದಿನ ಜೀವನ ಬದಲಾವಣೆಯಾಗದೇ ಹೋದರೆ ಅವರು ಹೃದಯಾಘಾತಕ್ಕೆ ಹತ್ತಿರವಾಗಿದ್ದಾರೆ ಎಂಬುದನ್ನು ತಿಳಿಸಲಾಗಿದೆ. ಜೊತೆಗೆ ಅಧ್ಯಯನ ತಂಡವೇ ವಿದ್ಯಾರ್ಥಿಗಳ ಮನೆಗೆ ಹೋಗಿ, ಅವರಿಗೆ ಡಯಟ್ ಪ್ಲಾನ್, ದೈಹಿಕ ಚಟುವಟಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿಕೊಟ್ಟಿದೆ. ಅಲ್ಲದೆ, ಜೆನಟಿಕ್ ಸಮಸ್ಯೆ ಇರುವ ಮಕ್ಕಳಲ್ಲಿ ಹೆತ್ತವರ ಜೊತೆ ಕುಳಿತು ಕೌನ್ಸಲಿಂಗ್ ಮಾಡಲು ತಂಡ ಮುಂದಾಗಿದೆ.
ಮಕ್ಕಳಲ್ಲಿ ಹೃದಯಾಘಾತವಾಗುವುದನ್ನು ತಪ್ಪಿಸಬೇಕಾದರೆ ಅವರ ಆಹಾರ ಪದ್ದತಿ ಬದಲಾಗಲೇಬೇಕಾಗಿದೆ. ಸಾಂಪ್ರದಾಯಿಕ ಆಹಾರ ಪದ್ಧತಿ ಚೆನ್ನಾಗಿತ್ತು. ಆದರೆ, ಹೆಚ್ಚಿನ ಮಕ್ಕಳು ಜಂಕ್ ಪುಡ್ ತಿನ್ನುವುದು, ಸಾಫ್ಟ್ ಡ್ರಿಂಕ್ಸ್ ಹೆಚ್ಚಾಗಿ ಕುಡಿಯುತ್ತಿದ್ದಾರೆ. ದೈಹಿಕ ಚಟುವಟಿಕೆ ಕಡಿಮೆಯಾಗಿದ್ದು, ಪಠ್ಯದ ಜೊತೆಗೆ ಆಟಕ್ಕೂ ಹೆಚ್ಚಿನ ಸಮಯ ನೀಡಬೇಕು. ಒಳ್ಳೆಯ ಜೀವನ ಶೈಲಿ, ಒಳ್ಳೆಯ ಆಹಾರ ಪದ್ಧತಿ ರೂಢಿ ಮಾಡಿಕೊಂಡರೆ ಹೃದಯದ ತೊಂದರೆಯಿಂದ ಪಾರಾಗಬಹುದು ಸಲಹೆ ನೀಡಿದ್ದಾರೆ.
ಸಂಶೋಧನೆಯಲ್ಲಿ ಭಾಗಿಯಾದ ಡಾ.ಮಂಜುನಾಥ ನೇಕಾರ ಪ್ರತಿಕ್ರಿಯಿಸಿ ಚಿಕ್ಕ ಮಕ್ಕಳಿಗೆ ಆಗುವ ಹೃದಯಾಘಾತ ತಪ್ಪಿಸಲು ಪೋಷಕರ ಪಾತ್ರ ಮುಖ್ಯವಾಗಿದೆ. ತಮ್ಮ ಮಕ್ಕಳು ಆಟದಲ್ಲಿ ಆಸಕ್ತಿ ವಹಿಸುವದನ್ನು ಕಲಿಸಬೇಕು. ಕೇವಲ ಮಾರ್ಕ್ಸ ತಗೆಯುವದೇ ಅವರ ಕಾಯಕವಾಗಬಾರದು. ಸ್ಕೂಲ್ ಗಳಲ್ಲಿ ಆಟದ ಮೈದಾನಳು ಇಲ್ಲ. ಸ್ಕೂಲ್ ಗಳು ಅಪಾರ್ಟ್ ಮೆಂಟ್ ಗಳಂತೆ ಆಗುತ್ತಿವೆ. ಪ್ರತಿ ಸ್ಕೂಲ್ ಗೂ ಆಟದ ಮೈದಾನ ಕಡ್ಡಾಯವಾಗಿ ಇರಬೇಕು. ಇದ್ರೆ ಮಾತ್ರ ಶಾಲೆಗೆ ಅನುಮತಿ ಕೊಡುವ ವ್ಯವಸ್ಥೆ ಬರಬೇಕು. ವರದಿಯಲ್ಲಿ ಬಂದಂತ ಆಘಾತಕಾರಿ ಅಂಶಗಳನ್ನು ಮೆಟ್ಟಿ ನಿಲ್ಲಬಹುದು.
ಪಾಲಕರು ಕೂಡ ಅವರ ಮೇಲಿನ ಅಕ್ಕರೆಗೆ ಸಿಹಿ ಪದಾರ್ಥ ಕೊಡುವದು ಹಠ ಮಾಡಿದ ಮಾತ್ರಕ್ಕೆ ಮೊಬೈಲ್ ಕೊಡುವದನ್ನು ತಪ್ಪಿಸಬೇಕು. ಜಂಗ್ ಫುಡ್ ತಿನ್ನುವದು ಹೆಚ್ಚಾಗುತ್ತಿದ್ದು, ಇದಕ್ಕೆ ಪೋಷಕರು ಕಡಿವಾಣ ಹಾಕುವದು ಅವಶ್ಯವಾಗಿದೆ ಎಂದರು.
ಸದ್ಯ ಅಧ್ಯಯನ ವರದಿಯನ್ನು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಐಸಿಎಂಆರ್ಗೆ ಕಳುಹಿಸಲಾಗಿದೆ. ಮಕ್ಕಳಲ್ಲಿ ಹೃದಯಾಘಾತದ ಲಕ್ಷಣಗಳು ಹೆಚ್ಚಾಗಿರುವ ಬಗ್ಗೆ ಮಾಹಿತಿ ನೀಡಿದ್ದು, ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಈ ರೀತಿಯ ಅಧ್ಯಯನಗಳನ್ನು ದೇಶಾದ್ಯಂತ ಎಲ್ಲೆಡೆ ಮಾಡಬೇಕಿದೆ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಕ್ರಮಗಳನ್ನು ಕೈಗೊಂಡರೆ, ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತದ ತೊಂದರೆ ತಪ್ಪಿಸಬಹುದು ಎಂಬುದು ಅಧ್ಯಯನ ಉದ್ದೇಶವಾಗಿದೆ.