ಬೆಳಗಾವಿ:- ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ನಡು ರಸ್ತೆಯಲ್ಲಿ ಅತ್ತೆ ಸೀರೆ ಹರಿದು ಅಳಿಯನಿಂದ ಹಲ್ಲೆ ನಡೆದಿರುವ ಘಟನೆ ಜರುಗಿದೆ.
KKR Vs RR: ಟಾಸ್ ಗೆದ್ದ ಕೊಲ್ಕತ್ತಾ ಬೌಲಿಂಗ್ ಆಯ್ಕೆ, ರಾಜಸ್ಥಾನ್ ಬ್ಯಾಟಿಂಗ್!
ತಾಲೂಕಿನ ಮಚ್ಚೆ ಗ್ರಾಮದಲ್ಲಿ ಅಳಿಯ ಭೈರು ಮೇತ್ರಿ ಹಾಗೂ ಕುಟುಂಬಸ್ಥರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹರಿದ ನೈಟಿಯಲ್ಲೇ ಮಹಿಳೆ ಕಮಿಷನರ್ ಕಚೇರಿಗೆ ತೆರಳಿ, “ನನ್ನ ಅಳಿಯ ಹಾಗೂ ಅವರ ಕುಟುಂಬಸ್ಥರು ನನ್ನ ಬಟ್ಟೆ ಹರಿದು, ರಸ್ತೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ” ಎಂದು ದೂರು ನೀಡಿದ್ದಾರೆ.
ಮಹಿಳೆಯ ಪುತ್ರಿ ಗರ್ಭಿಣಿಯಿದ್ದ, 12 ದಿನಗಳ ಹಿಂದೆ ಮಗಳಿಗೆ ಹೆರಿಗೆಯಾಗಿತ್ತು. ಗಂಡು ಮಗು ಜನಿಸುವಂತೆ ಪತ್ನಿಯನ್ನು ಕಳುಹಿಸುವಂತೆ ಪತಿ ಒತ್ತಾಯ ಮಾಡುತ್ತಿದ್ದನು. 4 ತಿಂಗಳ ಬಳಿಕ ಕಳುಹಿಸ್ತೇವೆ ಎಂದು ಅತ್ತೆ, ಅಳಿಯನಿಗೆ ಹೇಳಿದ್ದಾರೆ. ಇಷ್ಟಕ್ಕೆನೇ ಅಳಿಯ, ಅತ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.